ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಸೌರಮಾನ ಯುಗಾದಿ ಸಂಭ್ರಮಾಚರಣೆ

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ತಿನ ವತಿಯಿಂದ ಸೌರಮಾನ ಯುಗಾದಿ ಸಂಭ್ರಮಾಚರಣೆಯು ಗುಂಡಿಬೈಲಿನ ಬ್ರಾಹ್ಮೀ ಸಭಾಭವನದಲ್ಲಿ ಭಕ್ತಿ ಶ್ರದ್ಧಾಪೂರ್ವಕವಾಗಿ ನೆರವೇರಿತು.

ಮೊದಲಿಗೆ ಪರಿಷತ್ತಿನ ಮಹಿಳಾ ಸದಸ್ಯರಿಂದ ಭಜನೆ ನಂತರ ಜ್ಯೋತಿಷ್ಯ ವಿದ್ವಾನ್ ಹೆರ್ಗ ರವೀಂದ್ರ ಭಟ್ ಇವರಿಂದ ಶೋಭಕೃತ್ ನಾಮ ಸಂವತ್ಸರದ ಪಂಚಾಂಗ ಪೂಜೆ, ಪಂಚಾಂಗ ಶ್ರವಣ ಮತ್ತು ಯುಗಾದಿಯ ಮಹತ್ವದ ಬಗ್ಗೆ ವಿಶೇಷ ಧಾರ್ಮಿಕ ಪ್ರವಚನ ನಡೆಯಿತು. ಉಪನ್ಯಾಸ ನೀಡಿದ ಜ್ಯೋತಿಷ್ಯ ವಿದ್ವಾನ್ ಹೆರ್ಗ ರವೀಂದ್ರ ಭಟ್ ಇವರನ್ನು ಪರಿಷತ್ತಿನ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಾನಿಗಳಾದ ಶ್ರೀ ಪ್ರಮೋದ್ ತಂತ್ರಿ ಇವರನ್ನು ಗೌರವಿಸಲಾಯಿತು. ನೂತನ ಸದಸ್ಯರನ್ನು ಸೇರ್ಪಡೆಗೊಳಿಸಲಾಯಿತು. ಶ್ರೀ ವಿಷ್ಣು ಪ್ರಸಾದ್ ಪಾಡಿಗಾರ್ ಅತಿಥಿಗಳನ್ನು ಪರಿಚಯಿಸಿದರು. ಪರಿಷತ್ತಿನ ಅಧ್ಯಕ್ಷ ಚೈತನ್ಯ ಎಂ. ಜಿ. ಸ್ವಾಗತಿಸಿದರು. ಕೋಶಾಧಿಕಾರಿ ಕುಮಾರಸ್ವಾಮಿ ಉಡುಪ ಸಹಕರಿಸಿದರು. ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಎನ್. ವಂದಿಸಿದರು.

 
 
 
 
 
 
 
 
 
 
 

Leave a Reply