ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ 76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಗುಂಡಿಬೈಲಿನ ಬ್ರಾಹ್ಮೀ ಸಭಾಭವನದ ಮುಂಭಾಗದಲ್ಲಿ ಆಚರಿಸಲಾಯಿತು..

ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಭಾರತೀಯ ಭೂಸೇನೆಯ ನಿವೃತ್ತ ಯೋಧರಾದ ಶ್ರೀ ಕೆ. ಸುರೇಶ್ ರಾವ್ ಕುತ್ಪಾಡಿ ಇವರು ಧ್ವಜಾರೋಹಣಗೈದು ಮಾತನಾಡುತ್ತಾ ಸೇನೆಯಲ್ಲಿನ ತಮ್ಮ ವಿಶಿಷ್ಟ ಅನುಭವವನ್ನು ಮತ್ತು ಗಡಿ ಪ್ರದೇಶದಲ್ಲಿ ಯೋಧನಾಗಿ ಸೇವೆ ಮಾಡುವಾಗ ಎದುರಾಗುವ ಕಠಿಣ ಸವಾಲುಗಳನ್ನು ಹಂಚಿಕೊಂಡರು. ಅವರನ್ನು ಪರಿಷತ್ತಿನ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಪೂರ್ವಾಧ್ಯಕ್ಷರುಗಳಾದ ಶಶಿಧರ್ ಭಟ್, ಎಂ.ಎಸ್. ವಿಷ್ಣು, ಕೆ.ರಂಜನ್ ಕಲ್ಕೂರ, ವಿಷ್ಣುಪ್ರಸಾದ್ ಪಾಡಿಗಾರ್ ಮೊದಲಾದವರು ಉಪಸ್ಥಿತರಿದ್ದರು. ಮಹಿಳಾ ಸದಸ್ಯರಾದ ಪದ್ಮಲತಾ ವಿಷ್ಣು, ಸುಮಿತ್ರ ಕೆರೆಮಠ, ಅಮಿತಾ ಕ್ರಮದಾರಿ ಇವರು ರಾಷ್ಟ್ರಭಕ್ತಿಗೀತೆ ಹಾಡಿದರು. ಪರಿಷತ್ತಿನ ಅಧ್ಯಕ್ಷರಾದ ಚೈತನ್ಯ ಎಂ.ಜಿ .ಪ್ರಸ್ತಾವನೆಗೈದು ಸ್ವಾಗತಿಸಿದರು. ಕೋಶಾಧಿಕಾರಿ ಕುಮಾರಸ್ವಾಮಿ ಉಡುಪ ಸಹಕರಿಸಿ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಎನ್. ವಂದಿಸಿದರು..

 
 
 
 
 
 
 
 
 
 
 

Leave a Reply