ಯುವ ಬ್ರಾಹ್ಮಣ ಪರಿಷತ್ ನ “ಬ್ರಾಹ್ಮೀ ಸಭಾ ಭವನ”ದ  ಸಮರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ 

ಶ್ರೀಕೃಷ್ಣಮಠದ ಕನಕ ಮಂಟಪದಲ್ಲಿ,ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ) ಇವರಿಂದ ಗುಂಡಿಬೈಲಿನಲ್ಲಿ  ನೂತನವಾಗಿ ನಿರ್ಮಿಸಲ್ಪಟ್ಟ ಪರಿಷತ್ತಿನ ಸ್ವಂತ ಕಟ್ಟಡ  “ಬ್ರಾಹ್ಮೀ ಸಭಾ ಭವನ”ದ  ಸಮರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ  ಯುವ ಬ್ರಾಹ್ಮಣ ಪರಿಷತ್ತಿನ ಅಧ್ಯಕ್ಷರಾದ ವಿಷ್ಣುಪ್ರಸಾದ್ ಪಾಡಿಗಾರು,ಪ್ರಧಾನ ಕಾರ್ಯದರ್ಶಿಗಳಾದ ಪ್ರವೀಣ್ ಉಪಾಧ್ಯ, ಕಟ್ಟಡ ಸಮಿತಿಯ ಅಧ್ಯಕ್ಷ ರಂಜನ್ ಕಲ್ಕೂರ್, ಪ್ರಧಾನ ಕಾರ್ಯದರ್ಶಿ ಎಂ.ಎಸ್.ವಿಷ್ಣು, ಕಾರ್ಯದರ್ಶಿ ಚಂದ್ರಕಾಂತ್ ಕೆ.ಎನ್ ಹಾಗೂ ಪದಾಧಿಕಾರಿಗಳು ಮತ್ತು ಪರ್ಯಾಯ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್ ಉಪಸ್ಥಿತರಿದ್ದರು. 

 
 
 
 
 
 
 
 
 
 
 

Leave a Reply