ಶ್ರೀಕೃಷ್ಣಮಠದ ಕನಕ ಮಂಟಪದಲ್ಲಿ,ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ) ಇವರಿಂದ ಗುಂಡಿಬೈಲಿನಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಪರಿಷತ್ತಿನ ಸ್ವಂತ ಕಟ್ಟಡ “ಬ್ರಾಹ್ಮೀ ಸಭಾ ಭವನ”ದ ಸಮರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಯುವ ಬ್ರಾಹ್ಮಣ ಪರಿಷತ್ತಿನ ಅಧ್ಯಕ್ಷರಾದ ವಿಷ್ಣುಪ್ರಸಾದ್ ಪಾಡಿಗಾರು,ಪ್ರಧಾನ ಕಾರ್ಯದರ್ಶಿಗಳಾದ ಪ್ರವೀಣ್ ಉಪಾಧ್ಯ, ಕಟ್ಟಡ ಸಮಿತಿಯ ಅಧ್ಯಕ್ಷ ರಂಜನ್ ಕಲ್ಕೂರ್, ಪ್ರಧಾನ ಕಾರ್ಯದರ್ಶಿ ಎಂ.ಎಸ್.ವಿಷ್ಣು, ಕಾರ್ಯದರ್ಶಿ ಚಂದ್ರಕಾಂತ್ ಕೆ.ಎನ್ ಹಾಗೂ ಪದಾಧಿಕಾರಿಗಳು ಮತ್ತು ಪರ್ಯಾಯ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್ ಉಪಸ್ಥಿತರಿದ್ದರು.