ಕೊಳಲಗಿರಿ ಯುವ ವಿಚಾರ ವೇದಿಕೆಯ 23ನೇ ವಾರ್ಷಿಕೊತ್ಸವ

ಕೊಳಲಗಿರಿ ಯುವ ವಿಚಾರ ವೇದಿಕೆಯ 23ನೇ ವಾರ್ಷಿಕೊತ್ಸವ ಸಮಾರಂಭವೂ ಉಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ವೇದಿಕೆಯ ಸದಸ್ಯರು ಅಭಿನಯಿಸಿದ ತುಳು ಸಾಮಾಜಿಕ ಹಾಸ್ಯಮಯ ನಾಟಕ “ಅಜ್ಜಿಗ್ ಏರ್ಲಾ ಇಜ್ಜಿ” ಕಿಕ್ಕಿರಿದ ಜನ ಸಂದಣಿಯಲ್ಲಿ ಯಶಸ್ವಿಯಾಗಿ ಪ್ರದರ್ಶನವಾಯಿತು.

ಸಮಾರಂಭ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಭಟ್ ಅವರ ಅಮೃತ ಹಸ್ತದಿಂದ ದೀಪ ಬೆಳಗಿಸಿ ಉದ್ಘಾಟಿಸಿದರು.

ಸಮಾರಂಭದಲ್ಲಿ ನಮ್ಮ ಯುವ ವಿಚಾರ ವೇದಿಕೆಯ ಹಡಿಲು ಭೂಮಿ ಕೃಷಿಯ ಫಸಲನ್ನು ಫಲಾನುಭವಿಗಳಿಗೆ ವಿತರಣೆ ಮಾಡಿದ ನಮ್ಮ ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ಪಾಲ್ ಸುವರ್ಣ ಅವರು “ಸಮಾಜ ಸುಧಾರಣೆಯಲ್ಲಿ ಯುವಕರ ಪಾತ್ರ ಮಹತ್ವದ್ದು, ಗ್ರಾಮದ ಅಭಿವೃದ್ಧಿಗೆ ನನ್ನ ಸಹಕಾರ ಸದಾ ಇದೆ” ಎಂದು ವೇದಿಕೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ತಮ್ಮ ನಿಸ್ವಾರ್ಥ ಸೇವೆ ಹಾಗೂ ಅವಿರತ ದುಡಿಯುತ್ತಿರುವ ಸ್ಪಂದನ ವಿಶೇಷ ಚೇತನ ಶಾಲೆ ಮುಖ್ಯಸ್ಥರಾದ ಶ್ರೀ ಉಮೇಶ್ ಹಾಗೂ ಶ್ರೀ ಜನಾರ್ಧನ ಇವರನ್ನು ಸನ್ಮಾನಿಸಲಾಯಿತು. ಹಾಗೂ ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ತೋರಿದ ಸ್ಥಳೀಯ ವಿದ್ಯಾರ್ಥಿಗಳಾದ ಹರ್ಷಿತಾ ಪ್ರಜ್ಞಾ, ರಿಯಾ, ಪ್ರೀತಮ್ ಇವರನ್ನು ಅಭಿನಂದಿಸಲಾಯಿತು. ವಿಶೇಷವಾಗಿ ನಮ್ಮ ವೇದಿಕೆ ಅಭಿವೃದ್ದಿ ಕಾರ್ಯದಲ್ಲಿ ಸಹಕರಿಸಿದ ದಾನಿಗಳಾದ ಶ್ರೀ ಪ್ರಶಾಂತ್ ಶೆಟ್ಟಿ ಅಮ್ಮುಂಜೆ ಗೌರವಿಸಲಾಯಿತು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಉಪ್ಪೂರು ವ್ಯ.ಸೇ.ಸ. ಸಂಘದ ಅಧ್ಯಕ್ಷರಾದ ಶ್ರೀ ರಮೇಶ್ ಎನ್ ಶೆಟ್ಟಿ, ಕೊಳಲಗಿರಿ ಸೇಕ್ರೆಡ್ ಹಾರ್ಟ್ ಚರ್ಚ್ ನ ಧರ್ಮಗುರುಗಳು ರೆ.ಫಾ| ಜೋಸೆಫ್ ಮಚಾದೋ, ಉದ್ಯಮಿಗಳಾದ ಶ್ರೀ ರೋಯಲ್ ರತ್ನಾಕರ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಅಶ್ವಿನ್ ರೋಚ್, ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವೀಕ್ಷಕರಾದ ಶ್ರೀ ಪ್ರಾಂಕಿ ಡಿಸೋಜ, ಮಾಹೆ ಮಣಿಪಾಲದ ಪ್ರಾಧ್ಯಾಪಕರಾದ ಡಾ. ಪ್ರಶಾಂತ್ ಶೆಟ್ಟಿ ಅವರು ಉಪಸ್ಥಿತರಿದ್ದು ವೇದಿಕೆಯ ಸಾಮಾಜಿಕ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅಂದಿನ ಕಾರ್ಯಕ್ರಮವನ್ನು ಬೆಳಿಗ್ಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಸತೀಶ್ ಪೂಜಾರಿ ಅವರು ಗಣ್ಯರಾದ ಗ್ರಾಮ ಪಂಚಾಯತ್ ಸದಸ್ಯರು ಶ್ರೀ ರಾಜಶ್ರೀ ಮಸ್ಕರೇನಸ್, ಸಮಾಜ ಸೇವಕರಾದ ಶ್ರೀ ರಮೇಶ್ ಕರ್ಕೇರ, ಉದ್ಯಮಿಗಳಾದ ಶ್ರೀ ಸಂದೀಪ ನಾಯಕ್ ಅವರ ಉಪಸ್ಥಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.

ಸಭಾ ಕಾರ್ಯಕ್ರಮದ ಮುಂಚಿತವಾಗಿ ಸ್ಥಳೀಯ ಅಂಗನವಾಡಿ ಮಕ್ಕಳ ನೃತ್ಯ ಹಾಗೂ ನಮ್ಮ ವೇದಿಕೆಯ ಸದಸ್ಯರಾದ, ನೃತ್ಯ ಗುರು ವಿದ್ವಾನ್ ಕೆ ಭವಾನಿ ಶಂಕರ್ ಅವರ ನಿರ್ದೇಶನದಲ್ಲಿ ಸ್ಪಂದನ ವಿಶೇಷ ಚೇತನ ಶಾಲೆ ವಿದ್ಯಾರ್ಥಿಗಳು ಮನೋಜ್ಞವಾಗಿ ಅಭಿನಯಿಸಿದ ನೃತ್ಯ ರೂಪಕ “ಶ್ರೀ ರಾಮಾಯಣ ಕಥಾ ಸಾರಾಂಶ” ಪ್ರದರ್ಶನವಾಯಿತು. ಅಲ್ಲದೆ ಸಮಾರಂಭದ ನಂತರ ವೇದಿಕೆಯ ಮಹಿಳಾ ಸದಸ್ಯರು ಹಾಗೂ ಮಕ್ಕಳ ನೃತ್ಯ, ತದ ನಂತರ ವೇದಿಕೆಯ ಸದಸ್ಯರು ಅಭಿನಯಿಸಿದ ಯೋಗೀಶ್ ಗಾಣಿಗ ಕೊಳಲಗಿರಿ ನಿರ್ದೇಶನದಲ್ಲಿ ತುಳು ಸಾಮಾಜಿಕ ಹಾಸ್ಯಮಯ ನಾಟಕ “ಆಜ್ಜಿಗ್ ಏರ್ಲಾ ಇಜ್ಜಿ” ಯಶಸ್ವಿಯಾಗಿ ಪ್ರದರ್ಶನವಾಯಿತು.

ಸಭಾ ಕಾರ್ಯಕ್ರಮದ ಅತಿಥಿ ಗಣ್ಯರಿಗೆ ವೇದಿಕೆಯ ಅಧ್ಯಕ್ಷರಾದ ದಿನೇಶ್ ಶೆಟ್ಟಿ, ಬೆಳಗ್ಗಿನ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಸಂದೀಪ್ ಶೆಟ್ಟಿ ಸ್ವಾಗತಿಸಿ, ವೇದಿಕೆಯ ಅಶೋಕ್ ಹಾಗೂ ಸುರೇಶ್ ವಂದಿಸಿದರು. ವೇದಿಕೆಯ ಸದಸ್ಯರಾದ ಯೋಗೀಶ್ ಗಾಣಿಗ, ಸದಾಶಿವ ಕುಮಾರ್, ಸುಬ್ರಹ್ಮಣ್ಯ ಆಚಾರ್ಯ. ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply