ರಸ್ತೆ ಅಪಘಾತದಲ್ಲಿ ಚಿಟ್ಟಾಣಿ ಸುಬ್ರಹ್ಮಣ್ಯ ಹೆಗ್ಡೆಯವರಿಗೆ ಗಂಭೀರ ಗಾಯ

ಹೊನ್ನಾವರ: ದಿ.ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರ ಸುಪುತ್ರ ಖ್ಯಾತ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ಅಪಘಾತ ದಲ್ಲಿ ಗಾಯಗೊಂಡಿದ್ದಾರೆ. ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಇನ್ನೊಂದು ಬೈಕ್ ಅವರಿಗೆ ಡಿಕ್ಕಿ ಹೊಡೆದಿದೆ

ಹೊನ್ನಾವರ ಸಮೀಪದ ಹಡಿಬಾಳ ಎಂಬಲ್ಲಿ ಈ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿ ರುವ ಸುಬ್ರಹ್ಮಣ್ಯ ಚಿಟ್ಟಾಣಿ ಅವರನ್ನು ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿದೆ.

ಸುಬ್ರಹ್ಮಣ್ಯ ಚಿಟ್ಟಾಣಿ ಅವರು ತಮ್ಮದೇ ಆದ ಯಕ್ಷಗಾನ ಶೈಲಿಗೆ ಪ್ರಸಿದ್ಧಿಪಡೆದಿದ್ದಾರೆ. ಸುಬ್ರಹ್ಮಣ್ಯ ಚಿಟ್ಟಾಣಿ ಅವರು ಶೀಘ್ರ ಗುಣ ಮುಖರಾಗಲಿ ಎಂದು ಅವರ ಅಭಿಮಾನಿಗಳು  ಹಾರೈಸಿದ್ದಾರೆ.

 
 
 
 
 
 
 
 
 

Leave a Reply