ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ದೇಶಭಕ್ತಿ ಗೀತೆ ಕಾರ್ಯಕ್ರಮ

ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇದರ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಅರ್ಪಿಸುವ ದೇಶಭಕ್ತಿ ಗೀತೆ ಕಾರ್ಯಕ್ರಮಕ್ಕೆ ಉಡುಪಿಯ ಅದಿತಿ ಆರ್ಟ್ ಗ್ಯಾಲರಿಯಲ್ಲಿ ಖ್ಯಾತ ಮೂಳೆ ರೋಗ ತಜ್ಞ ಡಾ| ಕಿರಣ್ ಆಚಾರ್ಯ ದೀಪ ಬೆಳಗಿಸಿ ಉದ್ಘಾಟಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಆಗಸ್ಟ್ ಪ್ರಥಮ ವಾರದಲ್ಲಿ Samskruthi Vishwa ಯುಟ್ಯೂಬ್ ಚಾನೆಲ್ ಹಾಗೂ ಆಗಸ್ಟ್ 15ರಂದು ಮಾಧ್ಯಮ ಸಹಕಾರ ನೀಡಿದ ‘ಯು ಚಾನಲ್’ ನಲ್ಲಿ ಈ ಕಾರ್ಯಕ್ರಮ ಪ್ರಸಾರಗೊಳ್ಳಲಿದೆ.

 ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ. ಶಂಕರ್ ,ಪ್ರಧಾನ ಕಾರ್ಯದರ್ಶಿ ಗಿರೀಶ್ ತಂತ್ರಿ, ಖಜಾಂಚಿ ರಾಜೇಶ್ ಭಟ್ ಪಣಿಯಾಡಿ ,ಯುವ ಬಳಗದ ಅಧ್ಯಕ್ಷ ಮಹೇಶ್ ಮಲ್ಪೆ, ಸದಸ್ಯೆ ಸುಮಿತ್ರಾ ಕೆರೆಮಠ , ಸಂಚಾಲಕ ರವಿರಾಜ್ ಎಚ್. ಪಿ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply