ಹಿಂದೂ ಧರ್ಮದ ಸ್ಥಿತಿ ಗತಿಗಳು ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ

ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಅದಮಾರು ಮಠದ ಪರ್ಯಾಯ ಮಂಗಲೋತ್ಸವದ ‘ವಿಶ್ವಾರ್ಪಣಮ್’ ಸಮಾರಂಭದಲ್ಲಿ,ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಸಾಮಾಜಿಕ, ಧಾರ್ಮಿಕ, ವೈದ್ಯಕೀಯ, ಕಲಾಕ್ಷೇತ್ರ, ದೇಶ ಸೇವೆ,ಯೋಗ ಮುಂತಾದ ಕ್ಷೇತ್ರಗಳ ಸಾಧಕರಿಗೆ ಸನ್ಮಾನವನ್ನು ನೆರವೇರಿಸಿ,ಸಮಾಜದ ಕಟ್ಟಕಡೆಯ ವ್ಯಕ್ತಿಯಲ್ಲಿ ನಾವು ದೇವರನ್ನು ಕಾಣುವಾಗ ಅದು ಧರ್ಮ ಅನ್ನಿಸಿಕೊಳ್ಳುತ್ತದೆ ಅನುಗ್ರಹಿಸಿದರು.

ಭಾ.ಜ.ಪಾ ದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ “ಹಿಂದೂ ಧರ್ಮದ ಸ್ಥಿತಿ ಗತಿಗಳು” ಎಂಬ ವಿಷಯದ ಕುರಿತು,ಗುರುಗಳಿಂದ ಕಲಿತ ವಿದ್ಯೆ ಲೋಕಕ್ಕೆ ಉಪಯೋಗಗೊಳ್ಳುವತಹುದು ನಮ್ಮ ಶ್ರೇಷ್ಠ ಹಿಂದೂ ಧರ್ಮ ಎಂದು ವಿಶೇಷ ಉಪನ್ಯಾಸ ನೀಡಿದರು.

ಮಠದ ವ್ಯವಸ್ಥಾಪಕ ಗೋವಿಂದರಾಜ್ ಸ್ವಾಗತಿಸಿ, ಮಠದ ಆಸ್ಥಾನ ವಿದ್ವಾಂಸ ಕೃಷ್ಣರಾಜ ಭಟ್ ಕುತ್ಪಾಡಿ ಕಾರ್ಯಕ್ರಮ ನಿರ್ವಹಿಸಿದರು.

 
 
 
 
 
 
 
 
 
 
 

Leave a Reply