ಉಡುಪಿ: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ ಉಡುಪಿ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಮಲಬಾರ್ ವಿಶ್ವರಂಗ ಪುರಸ್ಕಾರ -2020 ಪ್ರದಾನ ಸಮಾರಂಭವು ಉಡುಪಿ ಗೀತಾಂಜಲಿ ಬಳಿಯ ಮಲಬಾರ್ ಗೋಲ್ಡ್ ಸಂಕಿರ್ಣದಲ್ಲಿ ಜರಗಿತು.



ಸಭಾಧ್ಯಕ್ಷತೆಯನ್ನು ಬಡಗುಬೆಟ್ಟು ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಇಂದ್ರಾಳಿ ಜಯಕರ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಣಿಪಾಲ ಮಾಹೆಯ ಎಂ.ಸಿ.ಇ.ಎಸ್ನ ನಿರ್ದೇಶಕಿ ಡಾ.ನೀತಾ ಇನಾಮ್ದಾರ್ ಹಾಗು ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ರವಿ ಬಸ್ರೂರ್ ಭಾಗವಹಿಸಿದ್ದರು.





