ಕರಂಬಳ್ಳಿ ಬ್ರಹ್ಮಕಲಶೋತ್ಸವದಲ್ಲಿ ಶಾಸಕ ಕೆ.ರಘುಪತಿ ಭಟ್ ರಿಗೆ ಸಂಮಾನ

ಉಡುಪಿ: ಕರಂಬಳ್ಳಿ ವೇಂಕಟರಮಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಸೋಮವಾರ ನಡೆದ ಧರ್ಮ ಸಭೆಯಲ್ಲಿ 2004 ರಿಂದ ಈ ವರೆಗೆ ಶ್ರೀ ದೇವಳವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಆಡಳಿತ ಮೊಕ್ತೇಸರ ಹಾಗೂ ಶಾಸಕ ಕೆ ರಘುಪತಿ ಭಟ್ಟರನ್ನು ಜೀರ್ಣೋದ್ಧಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಆಡಳಿತ ಮಂಡಳಿ ಮತ್ತು ಗ್ರಾಮಸ್ಥರ ಪರವಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸಂಮಾನಿಸಿದರು .

 ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥರು , ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರು, ರಾಜ್ಯ ವಿಧಾನ ಸಭೆ ಸ್ಪೀಕರ್ ವಿಶ್ವೇಶ್ವರ ಹೆಗೆಡೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ ‌,ಮುಖ್ಯಮಂತ್ರಿಗಳ‌ ಸಂಸದೀಯ ಕಾರ್ಯದರ್ಶಿ ಎಚ್ ಎನ್ ಜೀವರಾಜ್ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ ದಿವಾಕರ ಶೆಟ್ಟಿ , ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯಶ್ಪಾಲ್ ಎ ಸುವರ್ಣ ಪರ್ಯಾಯ ಅರ್ಚಕರುಗಳಾದ ಗೋವಿಂದ ಐತಾಳ್, ದಿವಾಕರ ಐತಾಳ್, ಪ್ರಸನ್ನ ಆಚಾರ್ಯ, ರಮೇಶ ಐತಾಳ್,ಆಡಳಿತ ಮಂಡಳಿ ಸದಸ್ಯರುಗಳಾದ ಕೆ ಗೋಪಾಲ ಶೆಟ್ಟಿ , ಶೇಖರ ಜತ್ತನ್ನ , ಎನ್ ಲಕ್ಷ್ಮಣ ಸೇರಿಗಾರ್, ಸುಂದರ ಅಮೀನ್, ಬಿ ಲಕ್ಷ್ಮೀನಾರಾಯಣ ಆಚಾರ್ಯ, ಶೈಲಶ್ರೀ ದಿವಾಕರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು

 
 
 
 
 
 
 
 
 
 
 

Leave a Reply