ಐವರು ಹಿರಿಯ ರಂಗಕರ್ಮಿಗಳಿಗೆ “ಮಲಬಾರ್ ವಿಶ್ವರಂಗ ಪುರಸ್ಕಾರ-2023ಕ್ಕೆ”

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ   ಪ್ರಧಾನ ಮಾಡುತ್ತಿರುವ ‘ಮಲಬಾರ್ ವಿಶ್ವರಂಗ ಪುರಸ್ಕಾರ 2023ಕ್ಕೆ ‘ ರಾಜ್ಯ ಮತ್ತು ಹೊರರಾಜ್ಯದ  ಐವರು ಹಿರಿಯ  ರಂಗಕರ್ಮಿಗಳು ಆಯ್ಕೆಯಾಗಿದ್ದಾರೆ.
 ರ್ತಿ ದೇರಾಜೆ (ರಂಗ ನಿರ್ದೇಶಕರು), ಶೋಭಾ ವೆಂಕಟೇಶ್ , ಬೆಂಗಳೂರು (ಮಕ್ಕಳ ರಂಗಭೂಮಿ) , ಎಂ.ಎಸ್. ಭಟ್ ಉಡುಪಿ ( ರಂಗ ನಟ) , ಮೋಹನ್ ಮಾರ್ನಾಡ್ ಮುಂಬೈ (ರಂಗ ನಟ ಹೊರ ರಾಜ್ಯ), ಪ್ರಕಾಶ್ ನೊರೋನ್ಹ ಪಾಂಬೂರು (ರಂಗ ಸಂಘಟಕರು)  ಇವರಿಗೆ
ಮಾರ್ಚ್ 26ರಂದು  ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನಡೆಯುವ ವಿಶ್ವರಂಗಭೂಮಿ ದಿನಾ ಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವರಂಗ ಪುರಸ್ಕಾರ- 2023’ ಪ್ರಧಾನ ಮಾಡಲಾಗುವುದು ಎಂದು ಮಲಬಾರ್ ವಿಶ್ವರಂಗ ಪುರಸ್ಕಾರ ಸಮಿತಿಯ ಸಂಚಾಲಕರಾದ ರಾಜೇಶ್ ಭಟ್ ಪಣಿಯಾಡಿ  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
 
 
 
 
 
 
 
 
 
 
 

Leave a Reply