ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ‘ಸಂಸ್ಕೃತಿ ಉತ್ಸವ -2024 ‘

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ‘ಸಂಸ್ಕೃತಿ ಉತ್ಸವ -2024 ‘ ಇದೆ ತಿಂಗಳ 23 ಮತ್ತು 24ನೇ ತಾರೀಕಿನಂದು ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಮುಂಬೈ ಕರ್ನಾಟಕ ಸಂಘದ ಅಧ್ಯಕ್ಷರಾದ ಕಲಾವಿದ, ನಿರ್ದೇಶಕ, ಸಾಹಿತಿ ಡಾ. ಭರತ್ ಕುಮಾರ್ ಪೊಲಿಪು ಇಂದು ಉಡುಪಿಯಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕರಾದ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷರಾದ ಪ್ರೊ. ಶಂಕರ್ , ಉಪಾಧ್ಯಕ್ಷ ಮರವಂತೆ ನಾಗರಾಜ ಹೆಬ್ಬಾರ್, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಮುಂಬೈ ರಂಗಭೂಮಿ ಕಲಾವಿದ ಮೋಹನ್ ಮಾರ್ನಾಡ್, ತುಳುಕುಟ ಉಡುಪಿಯ ಕಾರ್ಯದರ್ಶಿ ಗಂಗಾಧರ ಕಿದಿಯೂರು, ಕಲಾವಿದರಾದ ಜಯರಾಮ್ ಮಣಿಪಾಲ್, ಯಶೋಧ ಕರ್ಕೇರ, ನರಸಿಂಹಮೂರ್ತಿ, ಮಧುಕರ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು

 
 
 
 
 
 
 
 
 
 
 

Leave a Reply