ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಸಂಸ್ಕೃತಿ ಉತ್ಸವ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಎಂಜಿಎಂ ಕಾಲೇಜು ಉಡುಪಿ ಇವರ ಸಹಕಾರದೊಂದಿಗೆ ಸೋಮವಾರ ಜನವರಿ31ರಂದು ಸಂಸ್ಕೃತಿ ಉತ್ಸವವು ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿದೆ.

ಪ್ರಸಿದ್ಧ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರಿಗೆ ಶ್ರೀಮತಿ ಪ್ರಭಾವತಿ ಶೆಣಿೈ ಹಾಗೂ ಉಡುಪಿ ವಿಶ್ವನಾಥ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ’ ಪುರಸ್ಕಾರವನ್ನು ಒಂದು ಲಕ್ಷದ ಗೌರವಧನದೊಂದಿಗೆ ಪ್ರಧಾನ ಮಾಡಿ ಗೌರವಿಸಲಾಗುವುದು.

ಕಾರ್ಯಕ್ರಮದ ಉದ್ಘಾಟನೆಯನ್ನು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷರಾದ ಮೋಹನ್ ಆಳ್ವ ಅವರು ನೆರವೇರಿ ಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ವಿಶ್ವನಾಥ್ ಶೆಣಿೈ ಅವರ ಕುರಿತು ಸಾಕ್ಷ್ಯಚಿತ್ರ ಬಿಡುಗಡೆಗೊಳ್ಳಲಿದೆ.

ನಂತರ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಇದರ ಕಲಾವಿದರಿಂದ ರಂಗ ಮಾಂತ್ರಿಕ ಜೀವನ್ ರಾಂ ಸುಳ್ಯ ನಿರ್ದೇಶನದ ಮಕ್ಕಳ ಮಾಯಾಲೋಕ ನಾಟಕ ನಡೆಯಲಿದೆ . ಎಲ್ಲರಿಗೂ ಮುಕ್ತ ಪ್ರವೇಶವಿದೆ ಎಂದು ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 
 
 
 
 
 
 
 
 
 
 

Leave a Reply