ಇಂದು ಖ್ಯಾತ ನೃತ್ಯಗಾರ್ತಿ ವೈಜಯಂತಿ ಕಾಶಿ ಅವರನ್ನು ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ವತಿಯಿಂದ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಯು. ವಿಶ್ವನಾಥ ಶೆಣೈ ಅವರು ಗೌರವಿಸಿದರು.
ಇದೇ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಸಂಧ್ಯಾ ಶೆಣೈ ಪ್ರಧಾನ ಕಾರ್ಯದರ್ಶಿ ಗಿರೀಶ್ ತಂತ್ರಿ ಸದಸ್ಯರಾದ ಸುಮಿತ್ರಾ ಕೆರೆಮಠ, ಸೋಮನಾಥ ಚಿಟ್ಪಾಡಿ’, ವಿವೇಕಾನಂದ ಎನ್, ಸಂಚಾಲಕರಾದ ರವಿರಾಜ್ ಎಚ್.ಪಿ ಉಪಸ್ಥಿತರಿದ್ದರು.
ಈ ಹಿಂದೆ ಲಾಕ್ಡೌನ್ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವಪ್ರತಿಷ್ಠಾನ ಉಡುಪಿ ಆಯೋಜಿಸಿದ್ದ ನವರಸಗಳ ವಿಡಿಯೋ ಆನ್ಲೈನ್ ಕಾರ್ಯಕ್ರಮದಲ್ಲಿ ವೈಜಯಂತಿ ಕಾಶಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ವೀರ ರಸದ ಕುರಿತು ವಿಚಾರ ಅಭಿವ್ಯಕ್ತಪಡಿಸಿದ್ದರು.