ಪರ್ಕಳದ ಸರಿಗಮ ಭಾರತಿ ಸಂಗೀತ ವಿದ್ಯಾಲಯದಲ್ಲಿ ದಿ.24.10.2023ರಂದು ಬೆಳಿಗ್ಗೆ 8.30 ರಿಂದ ರಾತ್ರಿ 9.00ರವರೆಗೆ ವಿಜಯದಶಮಿ ಸಂಗೀತೋತ್ಸವ ನಡೆಯಲಿದೆ. ಬೆಳಿಗ್ಗೆ 9.30ಕ್ಕೆ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ, ರೊ.PHF.ಮಂಜುನಾಥ ಉಪಾಧ್ಯ ಅತಿಥಿಗಳಾಗಿ ಭಾಗವಹಿಸುವರು.
ಈ ಸಂದರ್ಭದಲ್ಲಿ ಬಹುಮುಖ ಪ್ರತಿಭೆಯ ಪಾಡಿಗಾರು ಶ್ರೀ ಲಕ್ಷ್ಮೀನಾರಾಯಣ ಉಪಾಧ್ಯ ಅವರನ್ನು ಅಭಿನಂದಿಸಿ ಗೌರವಿಸಲಾಗುವುದು. ಬೆಳಿಗ್ಗೆ 8.30ರಿಂದ ಪಿಳ್ಳಾರಿ ಗೀತೆಗಳು, 9.00ಕ್ಕೆ ಹೊಸ ಸಂಗೀತ ಪಾಠ.
6.50ರಿಂದ ‘ನಾಟ್ಯವಸಂತ’ ಕುಂದಾಪುರದ ಪ್ರವಿತಾ ಅಶೋಕ್ ಅವರ ಶಿಷ್ಯರಿಂದ ಭರತನಾಟ್ಯ,
8.10ರಿಂದ ಪುತ್ತೂರಿನ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ದೀಪಕ್ ಕುಮಾರ್ ಹಾಗೂ ಪ್ರೀತಿಕಲಾ ದೀಪಕ್ ಅವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ ಎಂದು ನಿರ್ದೇಶಕಿ ಉಮಾಶಂಕರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.