ಮಲಬಾರ್ ವಿಶ್ವರಂಗ ಪುರಸ್ಕಾರ-2020

ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ಜಂಟಿ ಆಶ್ರಯದಲ್ಲಿ ಮಲಬಾರ್ ವಿಶ್ವರಂಗ ಪುರಸ್ಕಾರ -2020 ಇದರ ಸಮಾರಂಭ ಬರುವ ಭಾನುವಾರ ಸಂಜೆ 5 ಗಂಟೆಗೆ ಉಡುಪಿಯ ಗೀತಾಂಜಲಿ ಬಳಿ ಇರುವ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಸಂಕಿರ್ಣದಲ್ಲಿ ನಡೆಯಲಿದೆ. 
 
ಈ ಬಾರಿ ಮಲಬಾರ್ ವಿಶ್ವರಂಗ ಪುರಸ್ಕಾರವನ್ನು  ಹಿರಿಯ ರಂಗಕರ್ಮಿಗಳಾದ ಶ್ರೀನಿವಾಸ್ ಶೆಟ್ಟಿಗಾರ್, ಡಾ| ಮಾಧವಿ ಭಂಡಾರಿ, ಜಯರಾಮ್ ನೀಲಾವರ, ರಾಜಗೋಪಾಲ್ ಶೇಟ್ ಹಾಗೂ ಅಭಿಲಾಷಾ ಎಸ್. ಇವರುಗಳಿಗೆ ನೀಡಲಾಗುವುದು.ಸಮಾರಂಭದ ಸಭಾಧ್ಯಕ್ಷತೆಯನ್ನು ಬಡಗುಬೆಟ್ಟು ಕೋ-ಆಪರೇಟಿವ್ ಸೊಸೈಟಿಯ ಮಹಾ ಪ್ರಬಂಧಕರಾದ ಇಂದ್ರಾಳಿ ಜಯಕರ ಶೆಟ್ಟಿ ಅವರು ವಹಿಸಲಿದ್ದು ,​ ​ಅತಿಥಿಗಳಾಗಿ ಮಣಿಪಾಲದ ಮಾಹೆಯ ಡಾ| ನೀತಾ ಇನಾಮ್ದಾರ್ ಹಾಗೂ ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕರಾದ ರವಿ ಬಸ್ರೂರ್ ಭಾಗವಹಿಸಲಿದ್ದಾರೆ.
 
​ಈ ಸಂದರ್ಭದಲ್ಲಿ ಕಥಾ ಸಪ್ತಾಹದಲ್ಲಿ ಆಯೋಜಿಸಿದ್ದ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಎಂಟು ಗಂಟೆಗೆ ಸಾಧನಾ ಸಂಸ್ಕೃತಿ ಅಭಿಯಾನ ಮಾಲಿಕೆಯಲ್ಲಿ ರಾಜೇಶ್ ಭಟ್ ಪಣಿಯಾಡಿ ಅವರ ಪರಿಕಲ್ಪನೆಯಲ್ಲಿ ಮೂಡಿಬರುತ್ತಿರುವ ಸಾಕ್ಷ್ಯಚಿತ್ರ ವನ್ನು Samskruthi Vishwa ಯೂ​ ​ಟ್ಯೂಬ್ನಲ್ಲಿ ವೀಕ್ಷಿಸಬಹುದು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.​​
 
 
 
 
 
 
 
 
 
 
 

Leave a Reply