ಯಕ್ಷಗಾನ ಕಲಿಕೆಗೆ ಪೂರಕ – ಪ್ರೊ. ವೈ. ಭಾಸ್ಕರ ಶೆಟ್ಟಿ

ಯಕ್ಷಗಾನದ ಕಲಿಕೆ ಮಕ್ಕಳಲ್ಲಿ ಆತ್ಮವಿಶ್ವಾಸ, ಪುರಾಣಜ್ಞಾನ, ಭಾಷಾ ಕೌಶಲ, ಕಠಿಣ ಪರಿಶ್ರಮ ಪ್ರವೃತ್ತಿ, ಕ್ರಿಯಾಶೀಲತೆಯನ್ನು ಬೆಳೆಸುತ್ತದೆ. ಇದರಿಂದ ಸಹಜವಾಗಿಯೆ ಯಕ್ಷಗಾನ ತರಬೇತಿ ಪಡೆದ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ದಾಖಲಿಸುತ್ತಾರೆ ಎಂದು ಎಂ. ಎಸ್. ಆರ್. ಎಸ್. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ವೈ. ಭಾಸ್ಕರ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಯಕ್ಷಶಿಕ್ಷಣ ಟ್ರಸ್ಟ್ ಆಯೋಜಿಸಿದ್ದ ಕಿಶೋರ ಯಕ್ಷಸಂಭ್ರಮ – ೨೦೨೩ ಶಿರ್ವದ ಮಹಿಳಾ ಸೌಧದಲ್ಲಿ ನಡೆಯಲಿರುವ ನಾಲ್ಕು ದಿನಗಳ ಪ್ರದರ್ಶನವನ್ನು ೨೫.೧೨.೨೦೨೩ರಂದು ಉದ್ಘಾಟಿಸಿ ಮಾತನಾಡಿದರು. ಎಂ. ಗಂಗಾಧರ ರಾವ್ ಅಧ್ಯಕ್ಷತೆ ವಹಿಸಿದ್ದರು. ಡಾ. ಸ್ಫೂರ್ತಿ ಶೆಟ್ಟಿ ಅಭ್ಯಾಗತರಾಗಿ ಭಾಗವಹಿಸಿದ್ದರು. ನಾರಾಯಣ. ಎಂ. ಹೆಗಡೆ, ಎಚ್. ಎನ್. ಶೃಂಗೇಶ್ವರ, ದೇವೇಂದ್ರ ನಾಯಕ್ ಉಪಸ್ಥಿತರಿದ್ದರು. ಶಿರ್ವ ಪ್ರದರ್ಶನ ಸಂಘಟನಾ ಸಮಿತಿಯ ಸಂಯೋಜಕ ವಿ. ಜಿ. ಶೆಟ್ಟಿ ಸ್ವಾಗತಿಸಿದರು, ಕೋಶಾಧಿಕಾರಿ ಅನಂತ ಮೂಡಿತ್ತಾಯ ವಂದಿಸಿದರು. ನಟರಾಜ ಉಪಾಧ್ಯಾಯ, ಗಣೇಶ ಬ್ರಹ್ಮಾವರ ಸಹಕರಿಸಿದರು. ಮುರಲಿ ಕಡೆಕಾರ್ ಪ್ರಸ್ತಾವನೆಯೊಂದಿಗೆ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply