ಬೆಂಗಳೂರು: ಏಪ್ರಿಲ್ 28 ರಿಂದ ನಡೆಯಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಈ ತೀರ್ಮಾನವನ್ನು ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರುಗಳೊಂದಿಗೆ ಅಧಿಕಾರಿ ಹಂತದ ಸುದೀರ್ಘ ಚರ್ಚೆಗಳನ್ನು ನಡೆಸಿ ತೆಗೆದುಕೊಳ್ಳಲಾಗಿದೆ, ವಿದ್ಯಾರ್ಥಿ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಪರೀಕ್ಷೆ ಮುಂದೂಡಿರುವ ಕಾರಣ ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆಯನ್ನು ಮುಂದುವರೆಸಬೇಕೆಂದು ಸಚಿವರು ಸಲಹೆ ನೀಡಿದ್ದಾರೆ.