ಮೂಡು ಅಲೆವೂರು ಕರ್ವಾಲು ಸರಕಾರಿ ಶಾಲಾ ಮಕ್ಕಳಿಗೆ ಕರ್ವಾಲಿನ ಶ್ರೀ ವಿಷ್ಣು ಸ್ನೇಹ ಬಳಗ ಸಂಸ್ಥೆಯ ದತ್ತು ಸ್ವೀಕಾರ ಕಾರ್ಯಕ್ರಮದಡಿಯಲ್ಲಿ ಕೋರಿಕೆಯ ಮೇರೆಗೆ ಸಂಸ್ಥೆಯ ಹಿತೈಷಿ ಹರಿಕ್ರಷ್ಣ ಭಟ್ ಮೂಡು ಅಲೆವೂರು ಕರ್ವಾಲು ಇವರು ಸಾವಿರಾರು ರು. ಮೊತ್ತದ ನೋಟ್ ಪುಸ್ತಕ, ಪೆನ್ ಪೆನ್ಸಿಲ್ ಇತ್ಯಾದಿ ಮಕ್ಕಳಿಗೆ ವಿದ್ಯಾರ್ಜನೆಗೆ ಬೇಕಾಗುವ ಅಗತ್ಯ ಪರಿಕರಗಳನ್ನು ನೀಡಿದರು.
ಹರಿಕ್ರಷ್ಣ ಭಟ್ ರವರಿಗೆ ಶ್ರೀ ವಿಷ್ಣು ಸ್ನೇಹ ಬಳಗ ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಕರ್ವಾಲು ಇವರು ಕೃತಜ್ಞತೆಯನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸವಿತಾ, ಪೋಷಕರಾದ ಹರೀಶ್ ನಾಯ್ಕ್, ಮಾನಸ ಮತ್ತಿತರರು ಉಪಸ್ಥಿತರಿದ್ದರು.