ಬಾಲಕಿಯರ ಪ. ಪೂ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

 ಉಡುಪಿ: ಬಾಲಕಿಯರ ಪ. ಪೂ ಕಾಲೇಜಿನಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ರವರ 130 ನೇ ಜನ್ಮದಿನಾಚರಣೆಯ ಕಾರ್ಯಕ್ರಮವು ಪ್ರಭಾರ ಪ್ರಾಂಶುಪಾಲರಾದ ಯಾದವ ಕರ್ಕೇರರವರ ನೇತೃತ್ವದಲ್ಲಿ ಕೋವಿಡ್ ನಿಯಮಗಳೊಂದಿಗೆ ನಡೆಯಿತು.

ಅಂಬೇಡ್ಕರ್ ರವರ ಜೀವನ,ಸಾಧನೆ, ಭಾರತದ ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ರವರ ಪಾತ್ರದ ಕುರಿತು ಪ್ರಥಮ ಪಿಯುಸಿ ವಿದ್ಯಾರ್ಥಿನಿ ವೃಂದ ಹಾಗೂ ಸಹ ಶಿಕ್ಷಕ ಶೇಖರ ಬೊವಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ ಬಾಯರಿ ವಿದ್ಯಾರ್ಥಿನಿ ಸಂಘದ ನಾಯಕಿಯರಾದ ಸಂಜನಾ ಮತ್ತು ಅಂಜಲಿ ಉಪಸ್ಥಿತರಿದ್ದರು. ಹಿರಿಯ ಉಪನ್ಯಾಸಕ ದಯಾನಂದ ಡಿ ಸ್ವಾಗತಿಸಿ, ಉಪನ್ಯಾಸಕರಾದ ಗಂಗಾಧರ್ ವಂದಿಸಿದರು. ಪ್ರಕಾಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply