ಉಡುಪಿ ಬಾಲಕಿಯರ ಪ ಪೂ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಗಳಿಗೆ  ಪ್ರೇರಣಾ ಶಿಬಿರ 

ಉಡುಪಿ ಬಾಲಕಿಯರ ಪ ಪೂ ಕಾಲೇಜಿನಲ್ಲಿ ಈ ಸಾಲಿನ ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಗಳಿಗೆ ನಡೆದ ಪ್ರೇರಣಾ  ಶಿಬಿರವನ್ನು ಶಿಕ್ಷಣ ಇಲಾಖೆಯ ಸಹನಿರ್ದೇಶಕ ಹಾಗೂ ಮಂಗಳೂರು ಸಿಟಿಇ ಪ್ರಾಂಶುಪಾಲ ಡಾ.ಸಿಪ್ರೀಯನ್ ಮಂತೆರೋ ಉದ್ಘಾಟಿಸಿದರು. 
 
ಈ ಸಂದರ್ಭದಲ್ಲಿ ಮಾತನಾಡಿ ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಆರೋಗ್ಯದ ಕಡೆಯು ಗಮನಹರಿಸುವಂತೆ ತಿಳಿಸಿದರು. ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ಡಯಟ್ ಉಪಪ್ರಾಂಶುಪಾಲ ಅಶೋಕ್ ಕಾಮತ್, ಉಪನ್ಯಾಸಕ ಯೋಗನರಸಿಂಹ ಸ್ವಾಮಿ ಭಾಗವಹಿಸಿದ್ದರು.  
 

ಕಾರ್ಯಕ್ರಮ ದಲ್ಲಿ ಡಿಡಿಪಿಐ ಎನ್ ಎಚ್ ನಾಗೂರ್,ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಮಂಜುಳಾ.ಕೆ  ಮಾತನಾಡಿದರು. ಡಯಟ್ ಉಪನ್ಯಾಸಕ ಗಣೇಶಕೃಷ್ಣ ಭಾಗವತ್ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಮುಖ್ಯ ಶಿಕ್ಷಕ ವಿಶ್ವನಾಥ ಬಾಯರಿ ಸ್ವಾಗತಿಸಿದರು.ಹಿರಿಯ ಶಿಕ್ಷಕಿ ಜಯಲಕ್ಷ್ಮಿ ಉರಾಳ್ ವಂದಿಸಿದರು.

 

ಸಂಸ್ಕೃತ ಭಾಷಾ ಶಿಕ್ಷಕ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು. ಉಡುಪಿ ನಗರಸಭಾ ವ್ಯಾಪ್ತಿಯ 5 ಪ್ರೌಢಶಾಲೆಗಳ 180 ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಿದ್ದರು.
 
 
 
 
 
 
 
 
 
 
 

Leave a Reply