ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ನೀಡಲ್ಪಟ್ಟ ಉಚಿತ ಸಮವಸ್ತ್ರ ವಿತರಣೆ

ಬಾಲಕಿಯರ ಪ ಪೂ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ನೀಡಲ್ಪಟ್ಟ ಉಚಿತ ಸಮವಸ್ತ್ರವನ್ನು ಉಡುಪಿ ನಗರಸಭಾ ಸದಸ್ಯೆ ರಶ್ಮಿ ಸಿ ಭಟ್ ವಿದ್ಯಾರ್ಥಿಗಳಿಗೆ ವಿತರಿಸಿದರು. ಕಳೆದ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ತಾರಾದೇವಿ ಎಚ್, ಮುಖ್ಯ ಶಿಕ್ಷಕ ವಿಶ್ವನಾಥ ಬಾಯರಿ, ಹಿರಿಯ ಶಿಕ್ಷಕಿ ಜಯಲಕ್ಷ್ಮಿ ಉರಾಳ್, ಎನ್ ಎಸ್ ಎಸ್ ಸಂಚಾಲಕಿ ಮಂಜುಳಾ, ಸಹ ಶಿಕ್ಷಕಿ ಇಂದಿರಾ, ಘಟಕದ ನಾಯಕಿ ನೇಹಾ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply