ಬಾಲಕಿಯರ ಪ ಪೂ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ನೀಡಲ್ಪಟ್ಟ ಉಚಿತ ಸಮವಸ್ತ್ರವನ್ನು ಉಡುಪಿ ನಗರಸಭಾ ಸದಸ್ಯೆ ರಶ್ಮಿ ಸಿ ಭಟ್ ವಿದ್ಯಾರ್ಥಿಗಳಿಗೆ ವಿತರಿಸಿದರು. ಕಳೆದ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ತಾರಾದೇವಿ ಎಚ್, ಮುಖ್ಯ ಶಿಕ್ಷಕ ವಿಶ್ವನಾಥ ಬಾಯರಿ, ಹಿರಿಯ ಶಿಕ್ಷಕಿ ಜಯಲಕ್ಷ್ಮಿ ಉರಾಳ್, ಎನ್ ಎಸ್ ಎಸ್ ಸಂಚಾಲಕಿ ಮಂಜುಳಾ, ಸಹ ಶಿಕ್ಷಕಿ ಇಂದಿರಾ, ಘಟಕದ ನಾಯಕಿ ನೇಹಾ ಉಪಸ್ಥಿತರಿದ್ದರು.