ಕುಂಜಿಬೆಟ್ಟಿನ ಟಿ ಎ ಪೈ ಇಂಗ್ಲೀಷ್ ಮೀಡಿಯಂ ಹೈಸ್ಕೂಲಿನಲ್ಲಿ ನಡೆದ ವಾರ್ಷಿಕ ಕ್ರೀಡಾ ಕೂಟದಲ್ಲಿ ಆತ್ರಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಸಂತೋಷ್ ಜೋಗಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕ್ರೀಡಾ ಜೋತಿ ಬೆಳಗಿಸಿದರು.
ಅವರು ಮಾತನಾಡುತ್ತಾ ‘ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ. ಭಾರತ ಸರಕಾರ ಯುವ ಪ್ರತಿಭೆಗೆ ಹೆಚ್ಚಿನ ಅದ್ಯತೆ ನೀಡುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸ ಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸುಹಾನಿ ಕಾಮತ್ ಶುಭ ಹಾರೈಸಿದರು.ವಿದ್ಯಾರ್ಥಿ ನಾಯಕ ಮಾ. ಮಹಮ್ಮದ್ ರುಹಾನ್ ರಿಯಾಸ್ ನಾಯಕಿ ಕು.ಲಾವಣ್ಯ ಎನ್ ಶೇಟ್ ಹಾಗೂ ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ. ವಿನೋದಾ ಶೆಟ್ಟಿ ಯವರು ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿ ಮಾ.ಗುರುಪ್ರೀತ್ ಶೇಟ್ ಅತಿಥಿಗಳನ್ನು ಪರಿಚಯಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಬೇಜಾವತಿ ಪಿ ಎಸ್ ವಂದನಾರ್ಪಣೆಗೈದರು. ವಿದ್ಯಾರ್ಥಿಗಳಾದ ಕು.ಶೃತಿ ಆರ್ ಪ್ರಭು, ಕು.ಶಾರ್ವರಿ ಪೈ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಶ್ರೀಮತಿ ಮೃದುಲಾ ವೀಕ್ಷಕ ವಿವರಣೆ ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕ ಶ್ರೀ. ಸುಧೀರ್ ಕುಮಾರ್ ಕಾರ್ಯಕ್ರಮವನ್ನು ಸಂಯೋಜಿಸಿದರು.ಸಭಾ ಕಾರ್ಯಕ್ರಮದ ನಂತರ ಕ್ರೀಡಾಕೂಟ ಸಂಪನ್ನಗೊAಡಿತು.