ನಾಳೆ ನಡೆಯಬೇಕಿದ್ದ ಸ್ನಾತಕ ಮತ್ತು ಪದವಿ ಅಂತಿಮ ಪರೀಕ್ಷೆ ಮುಂದೂಡಲಾಗಿದೆ

ಮಂಗಳೂರು: ಕೊರೊನಾದಿಂದ ಈ ಬಾರಿಯ ಪದವಿ ಮತ್ತು ಸ್ನಾತಕೋತ್ತರ ಅಂತಿಮ ವರ್ಷದ ವಿದ್ಯಾರ್ಥಿಗಳ ಪರೀಕ್ಷೆ ಮೊನ್ನೆಯಷ್ಟೇ ಪ್ರಾರಂಭವಾಗಿತ್ತು.​ ಆದರೆ ಕೊಡಗು ಮತ್ತು ಉಡುಪಿ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣ ರೆಡ್ ಅಲರ್ಟ್ ಘೋಷಣೆ ಯಾಗಿದೆ.​ ​ಈ ಹಿನ್ನೆಲೆ  ಮಂಗಳೂರು ವಿಶ್ವವಿದ್ಯಾನಿಲಯ ನಾಳಿನ ಸ್ನಾತಕ ಮತ್ತು ಪದವಿ ಅಂತಿಮ ವರ್ಷದ ಪರೀಕ್ಷೆಯನ್ನು ಮುಂದೂಡಿದೆ.
ಈ ಬಗ್ಗೆ ಲಿಖಿತವಾಗಿ ಮಾಹಿತಿ ನೀಡಿರುವ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು,ಭಾರೀ ಮಳೆಯ ಕಾರಣ ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.​ ​ಆದ್ದರಿಂದ 21- 9 -2020 ರಂದು ನಡೆಯಬೇಕಿದ್ದ ಸ್ನಾತಕ ಮತ್ತು ಪದವಿ ಪರೀಕ್ಷೆಗಳನ್ನು ಸದ್ಯ ಮುಂದೂಡಲಾಗಿದೆ ಹಾಗೂ ಮುಂದಿನ ದಿನಾಂಕವನ್ನು ಸದ್ಯದಲ್ಲಿ ತಿಳಿಸಲಾಗುವುದು ಎಂದು ಹೇಳಿದ್ದಾರೆ.
 
 
 
 
 
 
 
 
 

Leave a Reply