ಉಡುಪಿಯಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ

ಉಡುಪಿ: ಇಲ್ಲಿನ ನಗರಸಭೆ ಬಳಿಯ ನಗರ ಕೇಂದ್ರ ಗ್ರಂಥಾಲಯ ಉಡುಪಿ ಶಾಖೆ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆ ಇವರ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಹಾಗು ಪುಸ್ತಕ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮಕ್ಕೆ ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಸಾಹಿತಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಂದಿರಾ ಹಾಲಂಬಿ, ಉರಗ ತಜ್ಞ ಲೇಖಕರಾದ ಗುರುರಾಜ್ ಸನಿಲ್ ರನ್ನು ಅಭಿನಂದಿಸಲಾಯಿತು.

ಉಡುಪಿ ನಗರಸಭೆಯ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು ಮುಖ್ಯ ಗ್ರಂಥಾಲಯ ಅಧಿಕಾರಿ ಜಯಶ್ರೀ ಸ್ವಾಗತಿಸಿ, ಸುನೀತಾ ವಂದಿಸಿ, ಪ್ರೇಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply