ಉಡುಪಿ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿ ಕುರಿತು ಸಮಿತಿ ಸಭೆ

ಉಡುಪಿ: ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವ ಬಗ್ಗೆ ಸೋಮವಾರ ದಂದು ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆಯಲ್ಲಿ ಚರ್ಚೆ ಮಾಡಲಾಯಿತು.ಶಾಸಕ ಶ್ರೀ ಕೆ. ರಘುಪತಿ ಭಟ್ ಭಾಗವಹಿಸಿದ್ದರು ಹಾಗೂ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಶ್ರೀ ಜಿ. ಜಗದೀಶ್ ವಹಿಸಿದ್ದರು.ಜಿಲ್ಲಾ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ಮಾರ್ಕಿಂಗ್ ಮಾಡುವುದು, ಈಜುಕೊಳ ದುರಸ್ತಿ, ಒಳಾಂಗಣ ಕ್ರೀಡಾಂಗಣ ದುರಸ್ತಿ, ವಾಲಿಬಾಲ್ ಮತ್ತು ಬಾಸ್ಕೆಟ್ ಬಾಲ್ ಅಂಕಣಗಳಿಗೆ ಎಲ್.ಇ.ಡಿ ಲೈಟ್ ಅಳವಡಿಕೆ ಕುರಿತು ಚರ್ಚಿಸಿ, ಟೆನ್ನಿಸ್ ತರಬೇತುದಾರರ ವೇತನ, ಕ್ರೀಡಾಂಗಣ ಸಿಬ್ಬಂದಿಗಳ ವೇತನ ಹೆಚ್ಚಳ, ಬಾಹ್ಯ ಮೂಲ ಸಿಬ್ಬಂದಿಗಳ ವೇತನ ಪಾವತಿ ಕುರಿತಾಗಿಯು ಮಾತನಾಡಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಲ್ಹೋತ್, ನಗರಸಭೆ ಪೌರಾಯುಕ್ತ ಆನಂದ್ ಸಿ ಕಲ್ಲೋಲಿಕರ್, ಯುವಜನ ಸಬಲೀಕರಣ ಸಹಾಯಕ ನಿರ್ದೇಶಕ ರೋಷನ್ ಕುಮಾರ್ ಶೆಟ್ಟಿ ಮತ್ತು ಜಿಲ್ಲಾ ಕ್ರೀಡಾಂಗಣ ಸಮಿತಿಯ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

 
 
 
 
 
 
 
 
 
 
 

Leave a Reply