‘ಮನುಷ್ಯನು ತಾನು ಆಶ್ರಯ ಪಡೆದ ಮೇಲೆ ಆಶ್ರಯದಾತರನ್ನು ಮರೆಯಬಾರದು. ನಾವು ಬೆಳೆಯುತ್ತಾ ಉನ್ನತ ಸ್ಥಾನಕ್ಕೆ ಹೋದ ಹಾಗೆ ಅದಕ್ಕೆ ಕಾರಣೀಕರ್ತರಾದವರನ್ನು ಸ್ಮರಿಸಬೇಕು. ನಮ್ಮ ಊರು, ಭಾಷೆ, ನೆಲದ ಬಗ್ಗೆ ಅಭಿಮಾನ ಹೊಂದಿರಬೇಕು. ಹೆಚ್ಚೆಚ್ಚು ಸಾಧನೆ ಮಾಡಿ ಜನ್ಮ ಕೊಟ್ಟ ತಂದೆ ತಾಯಿಗೆ, ಶಿಕ್ಷಣ ನೀಡಿದ ಸಂಸ್ಥೆಗೆ ಹೆಸರನ್ನು ತರುವಂತಾಗಬೇಕು’ ಎಂದು ಶ್ರೀ ಅದಮಾರು ಮಠ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ನುಡಿದರು.
ದಿನಾಚರಣೆಯ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀಪಾದರು ಆಶೀರ್ವಚಿಸಿದರು. ಮುಖ್ಯ ಅಭ್ಯಾಗ ತರಾಗಿ ಆಗಮಿಸಿದ ಕನ್ನಡ ಚಿತ್ರರಂಗದ ಹಿನ್ನಲೆ ಗಾಯಕ, ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಗಣೇಶ್ ಕಾರಂತ್ ಮಾತನಾಡುತ್ತಾ, ‘ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು.
ಕಾಲೇಜಿನ ಆಡಳಿತ ಮಂಡಳಿಯ ಗೌರವ ಕೋಶಾಧಿಕಾರಿ ಸಿಎ ಟಿ.ಪ್ರಶಾಂತ್ ಹೊಳ್ಳರವರು ಶೈಕ್ಷಣಿಕ, ಸಾಂಸ್ಕೃತಿಕ ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಿ ಅಭಿನಂದಿಸಿದರು. ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಪ್ರತಿಮಾ ಬಾಳಿಗ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ವೇದಿಕೆ ಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕು.ರಿತಿಕಾ ಭಕ್ತ ಸ್ವಾಗತಿಸಿದರು.