​ಪ್ರಜ್ಞಾ ವಾರ್ಷಿಕ ಸಂಚಿಕೆ ಅನಾವರಣ

ಉಡುಪಿ: ಇಲ್ಲಿನ ಪೂರ್ಣಪ್ರಜ್ಞ ಪದವಿ ಕಾಲೇಜಿನ 2019-2020ನೇ ಸಾಲಿನ ವಾರ್ಷಿಕ ಸಂಚಿಕೆ “ಪ್ರಜ್ಞಾ” ಅನಾವರಣ ಸಮಾರಂಭವು ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು. ಸಂಚಿಕೆಯನ್ನು ಅನಾವರಣಗೊಳಿಸಿ ಆಶೀರ್ವದಿಸಿದ  ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ವಿದ್ಯಾರ್ಥಿಗಳಲ್ಲಿ ಸುಪ್ತ ಪ್ರತಿಭೆ ಹುದುಗಿರುತ್ತದೆ.
ಅವುಗಳ ಅನಾವರಣಕ್ಕೆ ಕಾಲೇಜು ಸೂಕ್ತ ವೇದಿಕೆ ಕಲ್ಪಿಸಬೇಕು. ಉಪನ್ಯಾಸಕರು ಅಂಥ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಬೇಕು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಶ್ರಮದ ಫಲವಾಗಿ ಮೂಡಿಬಂದ ಪ್ರಜ್ಞಾ ವಾರ್ಷಿಕ ಸಂಚಿಕೆ ವಿದ್ಯಾರ್ಥಿಗಳ ಪ್ರತಿಭೆಗೆ ಹಿಡಿದ ಕನ್ನಡಿ ಎಂದರು. ಕಾಲೇಜಿನ ಗೌರವ ಕೋಶಾಧಿಕಾರಿ ಪ್ರದೀಪ್‌ಕುಮಾರ್ ಮಾತನಾಡಿ ಪ್ರತಿಭಾವಂತ ಶಿಕ್ಷಕರಿಂದ ವಿದ್ಯಾರ್ಥಿಗಳ ಪ್ರತಿಭೆ ಇನ್ನಷ್ಟು ಬೆಳಕಿಗೆ ಬರಲಿ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ. ರಾಘವೇಂದ್ರ.ಎ. ಅಧ್ಯಕ್ಷತೆ ವಹಿಸಿದ್ದರು.  ಉಪಪ್ರಾಂಶುಪಾಲ ಡಾ.ಪ್ರಕಾಶ್ ರಾವ್ ಉಪಸ್ಥಿತರಿದ್ದರು. ಸಂಚಿಕೆಯ ಸಂಪಾದಕ ಡಾ. ರಮೇಶ್ ಟಿ.ಎಸ್. ಸ್ವಾಗತಿಸಿದರು. ಹಿಂದಿ ವಿಭಾಗದ ಮುಖ್ಯಸ್ಥ ಶ್ರೀ ಆನಂದ ರಾಯಮನೆ ವಂದಿಸಿದರು. ಕನ್ನಡ ಉಪನ್ಯಾಸಕಿ ಡಾ.ಪ್ರಜ್ಞಾ ಮಾರ್ಪಳ್ಳಿ  ಕಾರ್ಯಕ್ರಮ ನಿರೂಪಿಸಿದರು.​

 

 
 
 
 
 
 
 
 
 
 
 

Leave a Reply