ರಾಷ್ಟ್ರೀಯ ಶಿಕ್ಷಣ ನೀತಿ 2020 ಮಾಹಿತಿ ಕಾರ್ಯಾಗಾರ ಉದ್ಘಾಟನೆ

ಉಡುಪಿ : ಬದಲಾಗುತ್ತಿರುವ ಜಾಗತಿಕ ಆರ್ಥಿಕ ಶೈಕ್ಷಣಿಕ ರಂಗದಲ್ಲಿ ನಮ್ಮ ವಿದ್ಯಾರ್ಥಿಗಳು ಸ್ಪರ್ಧಾತ್ಮಕವಾಗಿ ಎದುರಿಸಿ ನಿಲ್ಲಬೇಕಾದರೆ ಅದಕ್ಕೆ ಪೂರಕವಾದ ಶಿಕ್ಷಣ ನೀಡ ಬೇಕಾದ ಅನಿವಾರ್ಯತೆ ಇದೆ.

ಈ ದಿಕ್ಕಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಹೆಚ್ಚು ಅರ್ಥ ಪೂರ್ಣವಾಗಿ ಸುದೃಢವಾಗಿ ಹೊರ ಹೊಮ್ಮಿದೆ.ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವದ ಬೆಳವಣಿಗೆ ಹೆಚ್ಚು ಒತ್ತು ನೀಡುವ ಶಿಕ್ಷಣ ನೀತಿ ಇದಾಗಿದ್ದು ವಿದ್ಯಾರ್ಥಿ ಸ್ನೇಹಿ ನೀತಿ ಅನ್ನಿಸಿಕೆುಾಂಡಿದೆ. ಗಳಿಸುವ ಜ್ಞಾನಕ್ಕೂ ಬದುಕಿನ ಉದ್ಯೋಗಕ್ಕೂ ನೇರ ಸಂಬಂಧ ಕಲ್ಪಿಸಿರುವುದು ಈ ನೀತಿಯ ವಿಶೇಷತೆ.ಸರ್ಕಾರ ಇದಾಗಲೇ ರಾಷ್ಟ್ರೀಯ ಉತ್ಪನ್ನದ ಶೇ.6 ರಷ್ಟು ಹಣವನ್ನು ಶಿಕ್ಷಣಕ್ಕಾಗಿ ಮೀಸಲಿಡಲು ಮುಂದಾಗಿದ್ದು ಭಾರತದ ಶೈಕ್ಷಣಿಕ ಕ್ಷೇತ್ರದಲ್ಲಿಯೇ ಇದೊಂದು ಕ್ರಾಂತಿಕಾರಿ ನಿರ್ಧಾರವಾಗಿದ್ದು ಇದನ್ನು ಯಶಸ್ವಿ ಗೊಳಿಸುವಲ್ಲಿ ಶಿಕ್ಷಣ ಇಲಾಖೆ ಶಿಕ್ಷಕರು ವಿದ್ಯಾರ್ಥಿಗಳು ಪೇೂಷಕರು ಹೆಚ್ಚು ಆಸಕ್ತಿವಹಿಸಿ ಪಾಲುಗೊಳ್ಳ ಬೇಕಾದ ಅನಿವಾರ್ಯ ಎಂದು ಅಂಕಣಕಾರ ನಿವೃತ್ತರಾಜ್ಯ ಶಾಸ್ತ್ರ ಪ್ರಾಧ್ಯಾಪಕ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಅಭಿಪ್ರಾಯಿಸಿದರು.

ಬಾರಕೂರು ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಪದವಿ ಕಾಲೇಜಿನ ಆಂತರಿಕ ಗುಣಮಟ್ಟ ಕೇೂಶದ ಆಶ್ರಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಮಾಹಿತಿ ಕಾರ್ಯಾಗಾರ ಉದ್ಘಾಟನೆ ಮಾಡಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಭಾರ ಪ್ರಾಂಶುಪಾಲ ಪ್ರೊ.ಶ್ರೀನಿವಾಸ ಶೆಟ್ಟಿ ವಹಿಸಿದ್ದರು.ಡಾ.ರಾಜಕುಮಾರ್ ಕಾಲೇಜಿನ ಆಂತರಿಕ ಗುಣಮಟ್ಟಭರವಸೆ ಕೇೂಶದ ಸಂಯೇೂಕರು ವೇದಿಕೆಯಲ್ಲಿ ಉಪಸ್ಥಿತಿರಿದ್ದರು.ಸಮಾಜ ಶಾಸ್ತ್ರ ವಿಭಾಗದ ಮುಖಸ್ಥರಾದ ಚಿಕ್ಕ ಹನುಮಯ್ಯ ಸ್ವಾಗತಿಸಿದರು.ಶ್ರುತಿ ಆಚಾರ್ಯ ಸಹಾಯಕ ಪ್ರಾಧ್ಯಾಪಕಿ ವಾಣಿಜ್ಯ ಶಾಸ್ತ್ರ ವಂದಿಸಿದರು.ವೀರಣ್ಣ ಎಸ್.ಸಹಾಯಕ ಪ್ರಾಧ್ಯಾಪಕರು ಅರ್ಥ ಶಾಸ್ತ್ರ ಕಾರ್ಯಕ್ರಮ ನಿರೂಪಿಸಿದರು.ವಿದ್ಯಾರ್ಥಿಗಳು ಪೇೂಷಕರು ಉಪನ್ಯಾಸಕರು ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿದರು.

 
 
 
 
 
 
 
 
 
 
 

Leave a Reply