ಬೆಂಗಳೂರು: ಕರ್ನಾಟಕದಲ್ಲಿ ಸದ್ಯಕ್ಕೆ ಶಾಲಾ-ಕಾಲೇಜು ಆರಂಭವಾಗುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ಕೋರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಶಾಲಾ-ಕಾಲೇಜುಗಳು ಆರಂಭ ವಾಗುವುದಿಲ್ಲ,ಸದ್ಯ ಅದರ ಬಗ್ಗೆ ಚರ್ಚೆ ನಡೆದಿಲ್ಲ, ವಿದ್ಯಾರ್ಥಿಗಳು ಮತ್ತು ಪೋಷಕರು ಗೊಂದಲವಾಗುವುದು ಬೇಡ ಎಂದು ಪ್ರಧಾನಿ ಮೋದಿಯೊಂದಿಗಿನ ಸಭೆಯ ನಂತರ ಸಚಿವ ಡಾ,ಕೆ ಸುಧಾಕರ್ ಹೇಳಿದ್ದಾರೆ .
ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆ ಸೆಪ್ಟೆಂಬರ್ ತಿಂಗಳ ಕೊನೆಯವರೆಗೂ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ವಿದ್ಯಾರ್ಥಿಗಳು ಹೋಗುವಂತಿಲ್ಲ ಎಂದು ರಾಜ್ಯ ಸರ್ಕಾರ ಇತ್ತೀಚೆಗೆ ತಿಳಿಸಿತ್ತು.