ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನಕ್ಕೆ ಡಾ|| ನಾ. ಸೋಮೇಶ್ವರ ಶ್ಲಾಘನೆ

ಉಡುಪಿ: ಇತ್ತೀಚೆಗೆ ಕುಂದಾಪುರದಲ್ಲಿ ನಡೆದ ವೈದ್ಯ ಸಾಹಿತ್ಯ ಸಮಾವೇಶದ ಉದ್ಘಾಟಕರಾಗಿ ಆಗಮಿಸಿದ್ದ ಚಂದನ ವಾಹಿನಿ ಥಟ್ ಅಂತ ಹೇಳಿ ಕಾರ್ಯಕ್ರಮ ಖ್ಯಾತಿಯ  ಡಾ|| ನಾ. ಸೋಮೇಶ್ವರ ಇವರು ಸಾಹಿತ್ಯ ಸಮಾವೇಶದ ಕಾರ್ಯಕ್ರಮದಲ್ಲಿ ಶೆಫಿನ್ಸ್ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ (ರಿ) ಇವರ ಸ್ಟಾಲನ್ನು ಭೇಟಿ ಮಾಡಿ, ಶೆಫಿನ್ಸ್ ಹಮ್ಮಿಕೊಳ್ಳುತ್ತಿರುವ ಸ್ಪೋಕನ್ ಇಂಗ್ಲಿಷ್ ಕಲಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನ ಕಾರ್ಯಕ್ರಮವನ್ನು ಶ್ಲಾಘಿಸಿದರು.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಕ್ಕಳ ತರಬೇತಿ ಪುಸ್ತಕಗಳಿಗೆ ಪ್ರಾಯೋಜಕರು ಲಭ್ಯವಿರುವ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅತಿಥಿ ಹಾಗೂ ಗೌರವ ಶಿಕ್ಷಕಿಯರಿಗೆ ಮತ್ತು ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ಉಚಿತವಾಗಿ ಸ್ಪೋಕನ್ ಇಂಗ್ಲಿಷ್ ಕಲಿಸುವ ಮೂಲಕ ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗಳತ್ತ ಹೆಚ್ಚು ಆಕರ್ಷಿಸಲು ಮತ್ತು ಆ ಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಲು ಪ್ರಯತ್ನಿಸುತ್ತಿರುವ ವಿಚಾರದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ಶೆಫಿನ್ಸ್ ನ ನಿರ್ದೇಶಕರಾದ ಮನೋಜ್ ಕಡಬ ಸ್ವರಣಿಕೆಯನ್ನಿತ್ತು ಅವರನ್ನು ಗೌರವಿಸಿದರು.  ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ| ಉಮೇಶ್ ಪುತ್ರನ್ ಮತ್ತು ಶೆಫಿನ್ಸ್ ಟ್ರಸ್ಟ್ ಆಡಳಿತ ವಿಶ್ವಸ್ಥೆಯಾದ ಶೆರ್ಲಿ ಮನೋಜ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply