ಮನುಷ್ಯರಂತೆಯೇ ಪ್ರಕೃತಿಯಲ್ಲಿರುವ ಎಲ್ಲಾ ಜೀವಸಂಕುಲಗಳಿಗೂ ಭಾವನೆಗಳಿವೆ. ಪ್ರಕೃತಿಯಲ್ಲಿ ಸಮತೋಲನವನ್ನು ಕಾಪಾಡಲು ಈ ಎಲ್ಲ ಜೀವ ಸಂಕುಲಗಳ ಅವಶ್ಯಕತೆಯಿದೆ. ಆದ್ದರಿಂದ ನಾವೆಲ್ಲರೂ ಪ್ರಕೃತಿಯನ್ನು ಪ್ರೀತಿಸಬೇಕು ಎಂದು ಖ್ಯಾತ ಉರಗತಜ್ಞ ಶ್ರೀಯುತ ಗುರುರಾಜ್ ಸನಿಲ್ರವರು ಹೇಳಿದರು.ಅವರು ಶಿರ್ವ ಸಂತ ಮೇರಿ ಕಾಲೇಜಿನ ಮಾನವಿಕ ಸಂಘ, ರಾಷ್ಟ್ರೀಯ ಸೇವಾ ಯೋಜನೆ, ಐಕ್ಯೂಎಸಿ ಘಟಕವು ಉಡುಪಿಯ ನಮ್ಮ ಮನೆ ನಮ್ಮ ಮರ ಸಂಸ್ಥೆಯ ಸಹಯೋಗದೊಂದಿಗೆ ರೈತರ ದಿನದ ಅಂಗವಾಗಿ ಆಯೋಜಿಸಿದ ‘ಸಸಿಗಳ ದತ್ತು ಸ್ವೀಕಾರ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ನಮ್ಮ ಮನೆ, ನಮ್ಮ ಮರ ಸಂಘಟನೆಯ ಸದಸ್ಯರಾದ ರವಿರಾಜ್ ಹೆಚ್.ಪಿ, ಅವಿನಾಶ್ ಕಾಮತ್ ದತ್ತು ಸಸಿಗಳನ್ನು ಕಾಲೇಜಿನ ಪ್ರಾಂಶುಪಾಲರು, ಎನ್ಎಸ್ಎಸ್ ಯೋಜನಾಧಿಕಾರಿಗಳು, ಮಾನವಿಕ ಸಂಘದ ಸಹ ಸಂಯೋಜಕರು ಹಾಗೂ ಸ್ವಯಂ ಸೇವಕರಿಗೆ ಹಸ್ತಾಂತರಿಸಿದರು. ದತ್ತು ಸ್ವೀಕರಿಸಿದ ಸಸಿಗಳನ್ನು ಕಾಲೇಜಿನ ಆವರಣದಲ್ಲಿ ನೆಡಲಾಯಿತು.ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲಡಾ. ಹೆರಾಲ್ಡ್ ಐವನ್ ಮೋನಿಸ್ರವದರು ಜಾಗತಿಕ ತಾಪಮಾನವನ್ನು ಕಡಿಮೆ ಮಾಡಲು ಹಸಿರು ಬೆಳೆಸುವ ಅಗತ್ಯತೆಯಿದೆ ಎಂದು ಹೇಳುತ್ತಾ ದತ್ತು ಸ್ವೀಕರಿಸಿದ ಗಿಡಗಳ ಪೋಷಣೆಯ ಜವಾಬ್ದಾರಿಯನ್ನು ಕಾಲೇಜು ವಹಿಸಲಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಘಟಕದ ಸಂಯೋಜಕ ಮೆಲ್ವಿನ್ ಕ್ಯಾಸ್ತಲಿನೋ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು, ಎನ್ಎಸ್ಎಸ್ ಯೋಜನಾಧಿಕಾರಿಗಳು, ಸ್ವಯಂ ಸೇವಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮಾನವಿಕ ಸಂಘದ ಸಹ ಸಂಯೋಜಕರಾದ ಕು. ಪದ್ಮಾಸಿನಿ ಯು. ಸ್ವಾಗತಿಸಿ, ಎನ್ಎಸ್ಎಸ್ ಯೋಜನಾಧಿಕಾರಿ ಶ್ರೀ ಪ್ರೇಮನಾಥ್ ವಂದಿಸಿದರು. ಸ್ವಯಂ ಸೇವಕಿ ಕು. ಅಕ್ಷತಾ ನಿರೂಪಿಸಿದರು.