ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುಲು ದೋಣಿಯಲ್ಲಿ ವಿದ್ಯಾರ್ಥಿಗಳ ಪಯಣ

ಉಡುಪಿ: ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ನದಿ ದಾಟಲಾಗದೇ ಪರಿತಪಿಸುತ್ತಿದ್ದ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ಇಬ್ಬರು ವಿದ್ಯಾರ್ಥಿನಿಯರನ್ನು ಸ್ವತಃ ಡಿಡಿಪಿಐ ಕಾಳಜಿ ವಹಿಸಿ ಕರೆತಂದ ಘಟನೆ ಬೈಂದೂರಿನಲ್ಲಿ ಗುರುವಾರ ನಡೆದಿದೆ. 

ಮರವಂತೆ ಸಮೀಪದ ಕುರು ದ್ವೀಪದ ನಿವಾಸಿಗಳಾದ ಮರವಂತೆ ಸರಕಾರಿ ಪ್ರೌಢಶಾಲೆಯ ಶಿಲ್ಪಾ ಹಾಗೂ ಸಂಜನಾ ಪರೀಕ್ಷೆಗೆ ಹಾಜರಾಗುವ ಬಗ್ಗೆ ಆತಂಕವನ್ನು ನೋಡಲ್ ಅಧಿಕಾರಿ ಕರುಣಾಕರ ಶೆಟ್ಟಿ ಗಮನಕ್ಕೆ ತಂದಾಗ ಅವರನ್ನು ಕರೆತರಲು ವ್ಯವಸ್ಥೆ ಮಾಡಲಾಯಿತು.

ಖುದ್ದು ಡಿಡಿಪಿಐ ಎಚ್.ಎನ್. ನಾಗೂರ ಹಾಗೂ ಬೈಂದೂರು ತಹಸೀಲ್ದಾರ್ ಶೋಭಾಲಕ್ಷ್ಮೀ ಸ್ವತಃ ದೋಣಿ ಹತ್ತಿಕೊಂಡು ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬಂದರು. ಶಿಕ್ಷಣ ಇಲಾಖೆಯ ಈ ಕಾಳಜಿಗೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

 
 
 
 
 
 
 
 
 
 
 

Leave a Reply