ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ. ಆಶಾ ವಿ ಶೆಟ್ಟಿಯವರು ಮಾತನಾಡಿ ವಿದ್ಯಾರ್ಥಿಗಳು ನಿರಂತರ ಅಭ್ಯಾಸ ಮಾಡಿ ಉತ್ತಮ ಭವಿಷ್ಯವನ್ನು ರೂಪಿಸಿ ಕೊಳ್ಳಬೇಕೆಂದು ಕರೆ ನೀಡಿದರು. ವಿವಿಧ ಕ್ಷೇತ್ರಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಗಳನ್ನು ವಿತರಿಸಲಾಯಿತು.
ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ . ವಿನೋದಾ ಶೆಟ್ಟಿಯವರು ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿ ನಾಯಕ ಆಶ್ಲೇಷ್ ಆರ್ ಭಟ್ ವಂದನಾರ್ಪಣೆಗೈದರು. ಕುಮಾರಿ ಕೃತಿ ಉಚ್ಚಿಲ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಶ್ರೀಮತಿ ಮೃದುಲಾ ಮತ್ತು ಶ್ರೀಮತಿ ರೂಪಶ್ರೀ ಕಾರ್ಯ ಕ್ರಮವನ್ನು ಸಂಯೋಜಿಸಿದರು.