ಟಿ.ಎ.ಪೈ ಪ್ರೌಢ ಶಾಲೆ : ಸ್ಥಾಪಕರ ದಿನಾಚರಣೆ

ಉಡುಪಿ ಕುಂಜಿಬೆಟ್ಟಿನ ಟಿ.ಎ. ಪೈ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಇತ್ತೀಚೆಗೆ  ಸ್ಥಾಪಕರ ದಿನಾಚರಣೆ ಜರಗಿತು. ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ನಿನ ಶಿಕ್ಷಣಾಧಿಕಾರಿಯಾದ ಶ್ರೀ ನಾಗೇಶ್ ಶ್ಯಾನುಭಾಗ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕಲೆ, ಕರಕುಶಲ ಮತ್ತು ವಿಜ್ಞಾನ ವಸ್ತು ಪ್ರದರ್ಶನವನ್ನು ದೀಪ ಬೆಳಗಿಸಿ ಉದ್ಫಾಟಿಸಿದರು. 
ಅವರು ಮಾತನಾಡುತ್ತಾ ನಿಯಂತ್ರಕನ ನಿಯಂತ್ರಣದಿ೦ದ ಗಾಳಿಪಟವು ಆಕಾಶದೆತ್ತರಕ್ಕೆ ಹಾರುವಂತೆ ಶಿಕ್ಷಕರ ಪೋಷಕರ ಮಾರ್ಗದರ್ಶನದಿಂದ ಮಕ್ಕಳು ಚೆನ್ನಾಗಿ ಕಲಿತು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ವಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ  ಶ್ರೀಮತಿ. ಆಶಾ ವಿ ಶೆಟ್ಟಿಯವರು ಮಾತನಾಡಿ ವಿದ್ಯಾರ್ಥಿಗಳು ನಿರಂತರ ಅಭ್ಯಾಸ ಮಾಡಿ ಉತ್ತಮ ಭವಿಷ್ಯವನ್ನು ರೂಪಿಸಿ ಕೊಳ್ಳಬೇಕೆಂದು ಕರೆ ನೀಡಿದರು. ವಿವಿಧ ಕ್ಷೇತ್ರಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಗಳನ್ನು ವಿತರಿಸಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯಿನಿ  ಶ್ರೀಮತಿ . ವಿನೋದಾ ಶೆಟ್ಟಿಯವರು  ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿ ನಾಯಕ ಆಶ್ಲೇಷ್ ಆರ್ ಭಟ್ ವಂದನಾರ್ಪಣೆಗೈದರು. ಕುಮಾರಿ ಕೃತಿ ಉಚ್ಚಿಲ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಶ್ರೀಮತಿ ಮೃದುಲಾ ಮತ್ತು ಶ್ರೀಮತಿ ರೂಪಶ್ರೀ ಕಾರ್ಯ ಕ್ರಮವನ್ನು ಸಂಯೋಜಿಸಿದರು.

 
 
 
 
 
 
 
 
 
 
 

Leave a Reply