ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿಯ ವಿದ್ಯಾರ್ಥಿಗಳಿಗೆ ಮತ್ತು ಬೋಧಕ/ ಬೋಧಕೇತರ ಸಿಬ್ಬಂದಿಗಳಿಗೆ ಉಡುಪಿ ಜಿಲ್ಲಾ ಆಡಳಿತ, ಆರೋಗ್ಯ ಇಲಾಖೆ ಮತ್ತು ಕೆಮ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದಲ್ಲಿ ಕೋವಿಡ್ ಲಸಿಕಾ ಅಭಿಯಾನ ಕಾರ್ಯಕ್ರಮವು ಎರಡನೇ ಬಾರಿಗೆ ನೆರವೇರಿತು.
ಪ್ರಭಾರ ಪ್ರಾಂಶುಪಾಲ ಡಾ. ಸುರೇಶ್ ರೈ ಕೆ., ನೋಡಲ್ ಆಫೀಸರ್ ಡಾ. ರಾಮಚಂದ್ರ ಪಾಟ್ಕರ್, ಕೆಮ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಮಾ ಹಾಗೂ ಕಾಲೇಜಿನ ಬೋಧಕ/ ಬೋಧಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸುಮಾರು ೫೦೦ ಡೋಸ್ ಲಸಿಕೆಯನ್ನು ನೀಡಲಾಯಿತು.