ಉಪೇಂದ್ರ ಪೈ ಮೆಮೋರಿಯಲ್ ಕಾಲೇಜ್ ಫಿಟ್ ಇಂಡಿಯಾ ಫ್ರೀಡಂ ರನ್ ಕಾರ್ಯಕ್ರಮ.

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 29 ರಂದು ಫಿಟ್ ಇಂಡಿಯಾ ಫ್ರೀಡಂ ರನ್ ಕಾರ್ಯಕ್ರಮವನ್ನು  ಆಯೋಜಿಸಲಾಯಿತು. 

ಅಭ್ಯಾಗತರಾಗಿ ಆಗಮಿಸಿದ ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷರಾದ ಪೋಂಪೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಜೇಮ್ಸ್ ಒಲಿವರ್ ಮಾತನಾಡಿ ವಿದ್ಯಾರ್ಥಿಗಳಿಗೆ ದೈಹಿಕ ಸುದೃಢತೆಯ ಮಹತ್ವದ ಅರಿವನ್ನು ಮೂಡಿಸಿದರು.

ದೈಹಿಕವಾಗಿ, ಮಾನಸಿಕವಾಗಿ, ಭಾವನಾತ್ಮಕವಾಗಿ, ಸಾಮಾಜಿಕವಾಗಿ ಸುದೃಢತೆಯನ್ನು ಹೊಂದಿದಾಗ ಮಾತ್ರ ಶರೀರದ ಸ್ವಾಸ್ಥ್ಯವು ಲಭಿಸಲಿದ್ದು ಸ್ವಸ್ಥ ಶರೀರದಿಂದ ಮನುಷ್ಯನು ಸರ್ವತೋಮುಖ ಬೆಳವಣಿಗೆಯನ್ನು ಕಂಡುಕೊಳ್ಳುವನು ಎಂಬುದಾಗಿ ಅವರು ಈ ಸಂದರ್ಭದಲ್ಲಿ ಹೇಳಿದರು.

ಕಾಲೇಜಿನ ದೈಹಿಕ ಶಿಕ್ಷಣ ವಿಭಾಗವು ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ಕಾಲೇಜಿನ ಪ್ರಾಚಾರ್ಯ ಡಾ.ಮಧುಸೂದನ್ ಭಟ್ ಇವರು ವಿದ್ಯಾರ್ಥಿಗಳ ಎರಡು ಕಿಲೋ ಮೀಟರ್ ಉದ್ದದ ಓಟಕ್ಕೆ ಚಾಲನೆ ನೀಡಿದರು.  ದ್ವಿತೀಯ ಬಿ.ಕಾಂ ಹಾಗೂ ಬಿಬಿಎ ವಿದ್ಯಾರ್ಥಿಗಳು ಈ ಓಟದಲ್ಲಿ ಭಾಗವಹಿಸಿದ್ದರು. 

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಗಣೇಶ್ ಕೋಟ್ಯಾನ್ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಉಪನ್ಯಾಸಕ ರಾಧಾಕೃಷ್ಣ ರಾವ್ ವಂದಿಸಿದರು. 

 
 
 
 
 
 
 
 
 
 
 

Leave a Reply