ಯು.ಪಿ.ಎಂ.ಸಿ ಅಂತರ್ಕಾಲೇಜು ಸಾಂಸ್ಕೃತಿಕ ಉತ್ಸವ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ಆಯೋಜಿಸಿದ ‘ಸಮ್ಮರ್ ಸೌಂಡ್ – 2023’ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ಕಾಲೇಜು ಸಾಂಸ್ಕೃತಿಕ ಉತ್ಸವಕ್ಕೆ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮನೋಹರ ಶೆಟ್ಟಿ ತೋನ್ಸೆಯವರು ದೀಪ ಬೆಳಗಿಸುವುದರ ಮೂಲಕ ಮೇ 26ರಂದು ಚಾಲನೆ ನೀಡಿದರು.

ಅಭ್ಯಾಗತರಾದ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಶ್ರೀ ರವಿರಾಜ್ ಹೆಚ್.ಪಿ ಯವರು ಮಾತನಾಡಿ ಪಠ್ಯದ ಜೊತೆಗೆ ಯಾವುದಾದರೂ ಪಠ್ಯೇತರ ಚಟುವಟಿಕೆಗಳನ್ನು ರೂಢಿಸಿಕೊಳ್ಳುವುದರಿಂದ ಸ್ವಯಂ ಬದುಕನ್ನು ರೂಪಿಸಿಕೊಳ್ಳಬಹುದು ಎಂದು ಹೇಳಿದರು.ಮಂಗಳೂರು ವಿಶ್ವವಿದ್ಯಾಲಯದ ಸುಮಾರು 15 ಕಾಲೇಜಿನ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಕಾಲೇಜಿನ ಪ್ರಾಚಾರ್ಯರಾದ ಡಾ. ಮಧುಸೂದನ ಭಟ್ ಅಧ್ಯಕ್ಷರಾಗಿದ್ದರು, ಉಪ ಪ್ರಾಂಶುಪಾಲೆ ಶ್ರೀಮತಿ ಆಶಾ ಕುಮಾರಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಾಪಕ ಸಲಹೆಗಾರರಾದ ಶ್ರೀಮತಿ ಪ್ರಭಾ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಫೇಜ್ಹ್ ಮೊಹಮ್ಮದ್ ಸ್ವಾಗತಿಸಿದರು, ಪ್ರಣೀತಾ ಧನ್ಯವಾದದೊಂದಿಗೆ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply