ಯುಪಿಎಂಸಿ- ಸಂದರ್ಶನ ಸಂವಹನ ಕಲೆ ತರಬೇತಿ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿ ಯಲ್ ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ವತಿಯಿಂದ ಜೂನ್ 26ರಂದು ಅಂತಿಮ ಬಿ.ಕಾಂ ಮತ್ತು ಬಿಬಿಎ ವಿದ್ಯಾರ್ಥಿ ಗಳಿಗೆ ಸಂದರ್ಶನ ಎದುರಿಸುವ ಕುರಿತಾದ ಸಂದರ್ಶನ ಸಂವಹನ ಕಲೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಲೈಫ್ ಸ್ಕಿಲ್ ಟ್ರೈನರ್ ಶ್ರೀ ಚಂದನ್ ರಾವ್ ವಿದ್ಯಾರ್ಥಿಗಳಿಗೆ ವಿವಿಧ ಉದಾಹರಣೆ ಮತ್ತು ಚಟುವಟಿಕೆಗಳನ್ನೊಳಗೊಂಡ ತರಬೇತಿ ಶಿಬಿರವನ್ನು ನಡೆಸಿಕೊಟ್ಟು, ಸಂದರ್ಶನ ಎದುರಿಸುವ ಮತ್ತು ಜಯಶೀಲರಾಗುವ ಹಲವು ಕೌಶಲಗಳನ್ನು ತಿಳಿಸಿ ಪ್ರಾತ್ಯಕ್ಷಿಕೆ ನೀಡಿದರು.

ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಆಶಾ ಕುಮಾರಿ ಅಧ್ಯಕ್ಷರಾಗಿದ್ದರು. ವಿದ್ಯಾರ್ಥಿನಿ ಸಂಗೀತ ಪೈ ಸ್ವಾಗತಿಸಿ, ನಿರೂಪಿಸಿದರು. ವೃತ್ತಿ ಮಾರ್ಗದರ್ಶನ ಘಟಕದ ಸಂಯೋಜಕರಾದ ಶ್ರೀ ಹರಿಕೇಶವ್ ಕಾರ್ಯಕ್ರಮ ಸಂಯೋಜಿಸಿ, ವಂದಿಸಿದರು.

 
 
 
 
 
 
 
 
 
 
 

Leave a Reply