ಯಕ್ಷಗಾನ ನೃತ್ಯ ಕಲಿಕೆ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ​ ಕಾರಣವಾಗುತ್ತದೆ​~ ಡಾ. ನಿ.ಬೀ. ವಿಜಯ ಬಲ್ಲಾಳ್​

ಯಕ್ಷಗಾನ ನೃತ್ಯ ಕಲಿಕೆ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ​ ಕಾರಣವಾಗುತ್ತದೆ. ಬದುಕಿಗೊಂದು ಶಿಸ್ತು ಕಲಿಸುತ್ತದೆ ಎಂದು  ಧರ್ಮದರ್ಶಿ ಡಾ. ನಿ.ಬೀ. ವಿಜಯ ಬಲ್ಲಾಳ್ಅಭಿಪ್ರಾಯ ಪಟ್ಟರು. ಅವರು ಅಂಬಲಪಾಡಿ ಶ್ರೀ​ ಲಕ್ಷ್ಮೀ ಜನಾರ್ದನ ಯಕ್ಷಗಾನ​ ಕಲಾಮಂಡಳಿಯ ನೂತನ ಕಟ್ಟಡ ‘ಶ್ರೀ ಜನಾರ್ದನ ಮಂಟಪ’ದಲ್ಲಿ ಜ್ಯೋತಿ​ ಬೆಳಗಿಸಿ ಯಕ್ಷಗಾನ ಕಲಿಕಾ ತರಗತಿ ಉದ್ಘಾಟಿಸಿ ಮಾತನಾಡುತ್ತಿದ್ದರು. 

 
ನೂತನ​ ಕಟ್ಟಡಕ್ಕೆ ಅಗತ್ಯವಿರುವ ಮೂಲ ಸೌಕರ್ಯ ಮತ್ತು ಪೀಠೋಪಕರಣಗಳ​ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ಯಕ್ಷಗಾನ ಕಲಾರಂಗದ​ ಅಧ್ಯಕ್ಷ ಎಂ. ಗಂಗಾಧರ ರಾವ್, ಇಂದಿರಾ ಶಿವರಾಯ ಪೂಲಿಟೆಕ್ನ್ನಿಕಲ್ ಕಾಲೇಜಿನ​ ನಿರ್ದೇಶಕ ಡಾ. ಮೋಹನ್‌ದಾಸ್ ಭಟ್ ಅಭ್ಯಾಗತರಾಗಿ ಭಾಗವಹಿಸಿದರು.​ ಯಕ್ಷಗಾನ ಗುರು ನರಸಿಂಹ ತುಂಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ​ ಯಾವುದೇ ಶುಲ್ಕವಿಲ್ಲದೆ ಪ್ರತೀ ಭಾನುವಾರ ತರಗತಿ ನಡೆಸಲಾಗುತ್ತದೆ.​​

ಎಲ್ಲ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಪೆನ್ನು ವಿತರಿಸಲಾಯಿತು. ಸಂಸ್ಥೆಯ ಅಧ್ಯಕ್ಷ​ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.​ ಸಂಸ್ಥೆಯ ಸದಸ್ಯ ಮಂಜುನಾಥ ತೆಂಕಿಲಾಯ ವಂದಿಸಿದರು. ಕೋಶಾಧಿಕಾರಿ​ ನಟರಾಜ ಉಪಾಧ್ಯ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಉಪಾಧ್ಯಕ್ಷ ಕೆ.ಅಜಿತ್ ಕುಮಾರ್ ಸದಸ್ಯರುಗಳಾದ ಪ್ರೂ. ನಾರಾಯಣ ಎಂ. ಹೆಗಡೆ, ಜಯ ಕೆ.,​ ಪ್ರವೀಣ ಉಪಾಧ್ಯ, ಪ್ರಕಾಶ್ ಹೆಬ್ಬಾರ್, ಸುನಿಲ್ ಕುಮಾರ್, ರಮೇಶ್ ಸಾಲ್ಯಾನ್​ ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply