ಕೊರೋನಾ ಸೋಂಕಿಗೆ  ಬಸವ ಕಲ್ಯಾಣ ಶಾಸಕ ನಾರಾಯಣರಾವ್ ಬಲಿ

ಬೆಂಗಳೂರು: ಕೊರೋನಾ ಸೋಂಕಿನಿಂದ ಬಸವ ಕಲ್ಯಾಣ ಶಾಸಕ ನಾರಾಯಣರಾವ್ (65) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿ ದ್ದಾರೆ.


ಇದೀಗ ಕೊರೋನಾ ಸೋಂಕಿನಿಂದ ಒಂದೇ ವಾರದಲ್ಲಿ ಮೂವರು ಜನಪ್ರತಿನಿಧಿ ನಿಧನರಾಗಿದ್ದಾರೆ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾರಾಯಣ ರಾವ್ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಚಿಂತಾಜನವಾಗಿತ್ತು.

ಚಿಕಿತ್ಸೆ ಫಲಕಾರಿಯಗದೇ ನಿಧನರಾಗಿದ್ದಾರೆ.
ಶಾಸಕ ನಾರಾಯಣರಾವ್ ಅವರಿಗೆ ನ್ಯುಮೋನಿಯಾ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಸಮಸ್ಯೆಯಿದ್ದು, ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

 
 
 
 
 
 
 
 
 
 
 

Leave a Reply