ಆದರ್ಶ ಆಸ್ಪತ್ರೆ ವತಿಯಿಂದ ವಿಶ್ವ ಹೃದಯ ದಿನಾಚರಣೆ

ಉಡುಪಿ- ಸೆ.30: ಸಾತ್ವಿಕ  ಜೀವನ ಶೈಲಿ, ಆಹಾರ ಪದ್ದತಿಯನ್ನು ಅನುಸರಿಸುವ  ಮೂಲಕ ಹೃದ್ರೋಗದ ಬಗ್ಗೆ ವೈದ್ಯರು ನೀಡಿದ ಸಲಹೆಗಳನ್ನು ಪಾಲಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು.
ಆದರ್ಶ ಆಸ್ಪತ್ರೆ ವತಿಯಿಂದ ಜಿಲ್ಲಾಾ ಆರೋಗ್ಯ ಇಲಾಖೆ, ಸರ್ವೇಕ್ಷಣಾ ಘಟಕ ಆಶ್ರಯದಲ್ಲಿ ಶನಿವಾರ ಬೆಳಗ್ಗೆ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಆವರಣದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಆಯೋಜಿಸಿದ ಹೃದ್ರೋಗ ಜಾಗೃತಿಗಾಗಿ ಹಮ್ಮಿಕೊಂಡ ಜಾಥಾಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಆದರ್ಶ ಆಸ್ಪತ್ರೆ ಹೃದ್ರೋಗ ತಜ್ಞ ಡಾ ಶ್ರೀಕಾಂತ್ ಮಾತನಾಡಿದರು. ನಗರಸಭೆ ಅಧ್ಯಕ್ಷೆ ಸುಮಿತ್ರಾಾ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಾಕರ ಹೆಗ್ಡೆ, ಮೈಸೂರು ಇಲೆಕ್ಟ್ರಿಕಲ್ ಆ್ಯಂಡ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ದ. ಕ. ಮತ್ತು ಉಡುಪಿ ಜಿಲ್ಲಾ  ಮೀನುಗಾರಿಕೆ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಅಂಡಾರು ದೇವಿಪ್ರಸಾದ್ ಶೆಟ್ಟಿ, ಜಿ. ಪಂ. ಮಾಜಿ ಅಧ್ಯಕ್ಷ ದಿನಕರ ಬಾಬು, ನಗರಸಭೆ ಸ್ಥಾಾಯಿ ಸಮಿತಿ ಅಧ್ಯಕ್ಷ ಡಿ. ಬಾಲಕೃಷ್ಣ ಶೆಟ್ಟಿ, ಸದಸ್ಯರಾದ ಟಿ. ಜಿ. ಹೆಗ್ಡೆ, ರಜನಿ ಹೆಬ್ಬಾರ್, ಚಂದ್ರಶೇಖರ್ ಶೇರಿಗಾರ್, ಪ್ರಭಾಕರ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಪ್ರಮುಖರಾದ ಗೀತಾಂಜಲಿ ಸುವರ್ಣ, ವೀಣಾ ಎಸ್. ಶೆಟ್ಟಿ ಉಪಸ್ಥಿತರಿದ್ದರು. ಡಿಎಚ್‌ಒ ಡಾ ನಾಗಭೂಷಣ್ ಉಡುಪ, ಸರ್ಜನ್ ಡಾ ಮಧುಸೂದನ್ ನಾಯಕ್ ಉಪಸ್ಥಿತರಿದ್ದರು. 
ವ್ಯಕ್ತಿಗೆ ಹೃದಯ ಸ್ಥಂಭನಗೊಂಡಾಗ ಪ್ರಥಮ ಚಿಕಿತ್ಸೆ ನೀಡುವ ಪ್ರಕ್ರಿಯೆ(ಸಿಪಿಆರ್) ಬಗ್ಗೆ ನರ್ಸಿಂಗ್ ವಿದ್ಯಾರ್ಥಿ ಗಳು ಪ್ರಾತ್ಯಕ್ಷಿಕೆ ನಡೆಸಿದರು.  ಆದರ್ಶ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ ಜಿ. ಎಸ್. ಚಂದ್ರಶೇಖರ್ ಸ್ವಾಗತಿಸಿ, ಪ್ರಸ್ತಾವಿಸಿದರು. ಜಿಲ್ಲಾಾಸ್ಪತ್ರೆ ಹಿರಿಯ ಚಿಕಿತ್ಸಾ ಮೇಲ್ವೀಚಾರಕ ಪ್ರಶಾಂತ್ ಶೆಟ್ಟಿ ನಿರೂಪಿಸಿದರು.
ಡಯಾನ ವೃತ್ತ- ಕೆಎಂ ಮಾರ್ಗವಾಗಿ ಆದರ್ಶ ಆಸ್ಪತ್ರೆಯಲ್ಲಿ ಜಾಥಾ ಸಮಾಪನಗೊಂಡಿತು. ವಿವಿಧ ನರ್ಸಿಂಗ್ ಕಾಲೇಜಿನ 1800 ವಿದ್ಯಾಾರ್ಥಿಗಳು ಹೃದ್ರೋಗ ಜಾಗೃತಿ ಮೂಡಿಸುವ ಫಲಕಗಳ ಪ್ರದರ್ಶಿಸಿದರು. ಅನಂತರ ಆದರ್ಶ ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
 
 
 
 
 
 
 
 
 
 
 

Leave a Reply