ಬೆಂಗಳೂರು: ನೈಟ್ ಕರ್ಫ್ಯೂ ಆದೇಶದ ಪುನರ್ ಪರಿಶೀಲನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಔ. 28 ರಿಂದ ಜನವರಿ 6 ರವರೆಗೆ ರಾತ್ರಿ 10 ರಿಂದ ಬೆಳೆಗ್ಗೆ 5 ರವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿರುವ ಕ್ರಮಕ್ಕೆ ಹೋಚೆಲ್ ಮಾಲೀಕರು, ಬಾರ್ ಮಾಲೀಕರು, ಆಟೋ ಚಾಲಕರು ಸೇರಿ ಕೆಲವರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿಎಂ ಈ ಸ್ಪಷ್ಟನೆ ನೀಡಿದ್ದಾರೆ.
ಅಕ್ಕಪಕ್ಕದ ರಾಜ್ಯದ ಪರಿಸ್ಥಿತಿ ನೋಡಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಉದ್ಯಮಿಗಳಿಗೆ ವ್ಯಾಪಾರ ವಹಿವಾಟು ನಷ್ಟವಾಗುತ್ತದೆ ಎಂಬುದು ಗಮನದಲ್ಲಿದೆ. ಆದರೆ, ಆರೋಗ್ಯದ ಹಿತದೃಷ್ಟಿಯಿಂದ ಬದಲಾವಣೆ ಸಾಧ್ಯವಿಲ್ಲ. ಈ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ’ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.