ಕೋವಿಡ್‌ ಎರಡನೇ ಅಲೆ ಬೀತಿ : 15 ದಿನಗಳ ಕಾಲ ಕಠಿಣ ಕ್ರಮ

ಬೆಂಗಳೂರು: ಕೋವಿಡ್‌ ಸೋಂಕಿನ ಎರಡನೇ ಅಲೆ ಕಾಣಿಸಿಕೊಳ್ಳುವ ಆತಂಕ ಎದುರಾಗಿದ್ದು ಇದನ್ನು ಎದುರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಜ್ಜಾಗುತ್ತಿದೆ. ಈ ವಿಚಾರವಾಗಿ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ವರದಿಯನ್ನು ನೀಡಿದ್ದು ಸರ್ಕಾರಕ್ಕೆ ಪ್ರಮುಖ ಶಿಫಾರಸುಗಳನ್ನು ಮಾಡಿದೆ.  
ಕೋವಿಡ್‌ ಸೋಂಕಿನ ಎರಡನೇ ಅಲೆ ಜನವರಿ ತಿಂಗಳಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಕೆಲವೊಂದು ಕಠಿಣ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯ ಜೊತೆಗೆ ಸಭೆ ನಡೆಸಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಬಳಿಕ ಸರ್ಕಾರದ ಮುಂದಿನ ನಡೆಯ ಕುರಿತಾಗಿ ಮಾಹಿತಿ ನೀಡಿದರು.  
ತಾಂತ್ರಿಕ ಸಲಹಾ ಸಮಿತಿ ಈ ಬಾರಿ ನೂತನ ವರ್ಷಾಚರಣೆ ಎಂದು ಸೂಚಿಸಿದೆ. ಜೊತೆಗೆ ಧಾರ್ಮಿಕ ಸಮಾರಂಭ, ಹಬ್ಬ ಹರಿದಿನಗಳಿಗೂ ಬ್ರೇಕ್‌ ಹಾಕುವಂತೆ ತಿಳಿಸಿದ್ದು ಡಿಸೆಂಬರ್‌ 20 ರಿಂದ ಜನವರಿ 2 ರ ವರೆದಿನ 15 ದಿನಗಳ ಕಾಲವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಶಿಫಾರಸು ಮಾಡಿದೆ ಎಂದು ಮಾಹಿತಿ ನೀಡಿದರು.  
ಡಿಸೆಂಬರ್‌ 20 ರಿಂದ ಜನವರಿ 2 ವರೆಗೆ ಎಲ್ಲಾ ರೀತಿಯ ಕಾರ್ಯಕ್ರಮ ಸಮಾರಂಭಗಳಿಗೆ ನಿಷೇಧ ಹೇರಬೇಕು ಎಂಬ ಸಲಹೆಯನ್ನು ಸಮಿತಿ ನೀಡಿದೆ. ಕೋವಿಡ್‌ ನಿಯಂತ್ರಣದ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.

ಸದ್ಯ ನಿರಂತರ ಕೋವಿಡ್‌ ತಪಾಸಣೆಗಳನ್ನು ನಡೆಸುತ್ತಿದ್ದು ಜನವರಿ ಬಳಿಕವೂ ಟೆಸ್ಟ್ ಪ್ರಮಾಣ ಹೆಚ್ಚಳ ಮಾಡಲಾಗುವುದು, 1,25,000 ಟೆಸ್ಟ್‌ ಮಾಡಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ವಿದ್ಯಾರ್ಥಿಗಳಿಗೂ ಕಡ್ಡಾಯಗೊಳಿಸುವಂತೆ ತಿಳಿಸಿದೆ ಎಂದ ಅವರು ಶಾಲೆ ಹಾಗೂ ಪಿಯುಸಿ ಕಾಲೇಜು ಆರಂಭದ ಕುರಿತಾಗಿ  ಡಿಸೆಂಬರ್‌ 3 ಅಥವಾ 4 ನೇ ವಾರದಲ್ಲಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಜೊತೆಗೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.  

 
 
 
 
 
 
 
 
 
 
 

Leave a Reply