ಉಡುಪಿ: 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗಾಗಿ “ವ್ಯಾಕ್ಸಿನ್ ಅಭಿಯಾನ” ನಡೆಯುತ್ತಿದ್ದು, ಡಾ.ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಲಸಿಕಾ ಅಭಿಯಾನಕ್ಕೆ ಇಂದು ಶಾಸಕ ಕೆ. ರಘುಪತಿ ಭಟ್ ಭೇಟಿ ನೀಡಿ ಪರಿಶೀಲಿಸಿದರು.
ಕಾಲೇಜಿನ ಪ್ರಾಂಶುಪಾಲ ಭಾಸ್ಕರ್ ಶೆಟ್ಟಿ, ದೈಹಿಕ ಶಿಕ್ಷಕರಾದ ರೋಷನ್ ಶೆಟ್ಟಿ, ಉಪನ್ಯಾಸಕ ರಾಮಚಂದ್ರ ಅಡಿಗ,ವೈದ್ಯಾಧಿಕಾರಿ ಡಾ. ವೇಣುಗೋಪಾಲ್ ಹಾಗೂ ವೈದ್ಯಕೀಯ ಸಿಬ್ಬಂದಿಯವರು ಉಪಸ್ಥಿತರಿದ್ದರು.