ಗಾಂಧಿ ಆಸ್ಪತ್ರೆ ಉಡುಪಿ ~ಬೃಹತ್ ರಕ್ತದಾನ ಶಿಬಿರ.

05.05.2024ರಂದು ಪ್ರಾರಂಭಗೊ೦ಡ ಗಾಂಧಿ ಆಸ್ಪತ್ರೆಯು 30ನೇ ವರ್ಷಕ್ಕೆ ಪಾದಾರ್ಪಣೆಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಪಂಚಮಿ ಟ್ರಸ್ಟ್ ಮತ್ತು ಪಂಚಲಹರಿ ಫೌಂಡೇಶನ್ ಆಶ್ರಯದಲ್ಲಿ  ಮೇ 5, ರವಿವಾರದಂದು ಬೆಳ್ಳಿಗ್ಗೆ 9.00ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಉಡುಪಿ ಗಾಂಧಿ ಆಸ್ಪತ್ರೆಯಲ್ಲಿ ರಕ್ತನಿಧಿ, ಜಿಲ್ಲಾಸ್ಪತ್ರೆ, ಉಡುಪಿ ಇವರ ಸಹಯೋಗದೊಂದಿಗೆ ‘ಬೃಹತ್ ರಕ್ತದಾನ ಶಿಬಿರ’ವು ನಡೆಯಲಿದೆ.
ಶಿಬಿರವನ್ನು ಉಡುಪಿಯ ಜಿಲ್ಲಾಧಿಕಾರಿಯವರಾದ ಡಾ. ಕೆ. ವಿದ್ಯಾಕುಮಾರಿ ಉದ್ಘಾಟಿಸಲಿದ್ದು, ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಐ. ಪಿ. ಗಡಾದ, ಉಡುಪಿ ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್,  ಐ.ಎಂ.ಎ ಉಡುಪಿ-ಕರಾವಳಿ ಶಾಖೆಯ ಅಧ್ಯಕ್ಷೆ ಡಾ. ರಾಜಲಕ್ಷ್ಮೀ  ಹಾಗೂ ಉಡುಪಿ ಜಿಲ್ಲಾಸ್ಪತ್ರೆ ರಕ್ತನಿಧಿಯ ವೈದ್ಯಾಧಿಕಾರಿ ಡಾ. ವೀಣಾಕುಮಾರಿರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಯುವ ವಿಜ್ಞಾನಿ  ಡಾ. ಎನ್. ರಮೇಶ್ ಹೊಳ್ಳ, ನಿವೃತ ಸಂಸ್ಕೃತ ಪ್ರಾಧ್ಯಾಪಕ ಡಾ. ಗಣಪತಿ ಭಟ್, ರಾಷ್ಟ ಮಟ್ಟದ ಮಹಿಳಾ ದಿವ್ಯಾಂಗರ ಕ್ರಿಕೆಟ್ ಪಂದ್ಯಾಟದಲ್ಲಿ ಜಯಭೇರಿ ಬಾರಿಸಿದ ಕರ್ನಾಟಕ ತಂಡದ ಸವ್ಯಸಾಚಿ ಆಟಗಾರ್ತಿ ಕು. ಶ್ರೀಲತಾ, ಬಾಲ ಪ್ರತಿಭೆಗಳಾದ ಮನ್ಯು ವಿ. ತಂತ್ರಿ ಹಾಗೂ ಮಧ್ವ ವಿ. ತಂತ್ರಿಯವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.

ಸಾಮಾಜಿಕ ಕಳಕಳಿಯಿಂದ ಕಳೆದ 30ವರ್ಷಗಳಿಂದ ರಕ್ತದಾನ ಶಿಬಿರವು ನಡೆಯುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಸಮಾಜಸೇವೆಯಲ್ಲಿ ಗಾಂಧಿ ಆಸ್ಪತ್ರೆಯೊಂದಿಗೆ ಕೈಜೋಡಿಸಬೇಕಾಗಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply