ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ 19 ದಾದಿಯರ ಮೊದಲ ತಂಡ ದೆಹಲಿಗೆ

ಮಣಿಪಾಲ, 4, :ಪ್ರಸ್ತುತ ಭಾರತದ ರಾಜಧಾನಿ, ದೆಹಲಿಯಲ್ಲಿ ಕೊರೊನ ಸಾಂಕ್ರಾಮಿಕವೂ ವ್ಯಾಪಕವಾಗಿ ಹರಡಿರುವುದರಿಂದ, ಮಣಿಪಾಲ ಸಂಸ್ಥೆಯ ಸಹ ಸಂಸ್ಥೆಯಾದ ಮಣಿಪಾಲ ಆಸ್ಪತ್ರೆ ದ್ವಾರಕಾದ ಬೇಡಿಕೆಯ ಮೇರೆಗೆ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ 19 ದಾದಿಯರ(ನರ್ಸ್) ಮೊದಲ ತಂಡ ಇಂದು ದೆಹಲಿಗೆ ತೆರಳಿತು.

03 ಮೇ 2021 ರಂದು ನರ್ಸಿಂಗ್ ವೃತ್ತಿಪರರ ಹೆಚ್ಚಿನ ಅವಶ್ಯಕತೆಯ ಕೋರಿಕೆಯನ್ನು ಮಣಿಪಾಲ ದ್ವಾರಕಾ ಆಸ್ಪತ್ರೆಯು ನೀಡಿತ್ತು. ಇದು ಇಡೀ ಮಣಿಪಾಲ ಸಮೂಹಕ್ಕೆ ಹೆಮ್ಮೆಯ ಕ್ಷಣವಾಗಿದೆ.

ದಾದಿಯರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ತಮ್ಮ ನಿಸ್ವಾರ್ಥ ಸೇವೆಯನ್ನು ನೀಡುವುದಲ್ಲದೆ, ತಮ್ಮ ಆರೈಕೆ ಮತ್ತು ಜೀವ ಉಳಿಸುವ ವೃತ್ತಿಯ ಬಗ್ಗೆ ನಿಜವಾದ ಪ್ರೀತಿಯನ್ನು ಪ್ರದರ್ಶಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ಶ್ಲ್ಯಾಘಿಸಿದೆ.

 
 
 
 
 
 
 
 
 

Leave a Reply