ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಎಲ್ಲಾ ಹೊರರೋಗಿ ಸೇವೆಗಳು ಮಧ್ಯಾಹ್ನದವರಗೆ ಮಾತ್ರ ಲಭ್ಯ

 ಮಣಿಪಾಲ: ಕರ್ನಾಟಕ ಸರಕಾರದ ಆದೇಶದಂತೆ ರಾಜ್ಯಾದ್ಯಂತ ಲಾಕ್ ಡೌನ್ ಮಾದರಿಯಲ್ಲಿ ಜನತಾ ಕರ್ಫ್ಯೂ ಜಾರಿಯಲ್ಲಿರುವುದರಿಂದ ಮತ್ತು ಸಾರ್ವಜನಿಕ ಸಾರಿಗೆಯ ಲಭ್ಯತೆಯ ಕೊರತೆಯ ಕಾರಣ , ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ 29ನೇ ಏಪ್ರಿಲ್2021 ಗುರುವಾರದಿಂದ ಜಾರಿಗೆ ಬರುವಂತೆ, ಎಲ್ಲಾ ಹೊರರೋಗಿ ಸೇವೆಗಳು ಬೆಳಿಗ್ಗೆ 8.00 ರಿಂದ ಮಧ್ಯಾಹ್ನ 2.00 ರವರೆಗೆ ಅರ್ಧ ದಿನ ಮಾತ್ರ ಕಾರ್ಯನಿರ್ವಹಿಸಲಿವೆ.

 ಈ ಬದಲಾವಣೆಯು ಸರ್ಕಾರದ ಜನತಾ ಕರ್ಫ್ಯೂ ಆದೇಶ ಇರುವವರೆಗೆ ಮುಂದುವರಿಯುತ್ತದೆ. ತುರ್ತು ಸೇವೆಗಳು ಎಂದಿನಂತೆ ಎಲ್ಲಾ ದಿನಗಳಲ್ಲಿ ಲಭ್ಯವಿರುತ್ತವೆ ಎಂದು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 
 
 
 
 
 
 
 
 
 
 

Leave a Reply