ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ಕೋವಿಡ್ ಸೋಂಕಿತ ಸದಸ್ಯರ ಆರೋಗ್ಯ ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ :ಯಶ್‌ಪಾಲ್ ಎ ಸುವರ್ಣ

ಮಹಾಲಕ್ಷ್ಮೀ  ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆಗೊಳಗಾದ ಬ್ಯಾಂಕಿನ ಅರ್ಹ ಸದಸ್ಯರಿಗೆ ವೈದ್ಯಕೀಯ ಸಹಾಯ ಧನ ನೀಡುವ ಯೋಜನೆ ರೂಪಿಸಲಾಗಿದ್ದು, ಕೊರೋನ ಸೋಂಕಿಗೆ ತುತ್ತಾದ ಸದಸ್ಯರು ಅರ್ಜಿ ಸಲ್ಲಿಸುವಂತೆ ಬ್ಯಾಂಕಿನ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.
ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆಗೆ ಒಳಗಾಗಿ ಆರ್ಥಿಕ ಸಂಕಷ್ಟಕ್ಕೀಡಾಗಿರುವ ಬ್ಯಾಂಕಿನ ಅರ್ಹ ಸದಸ್ಯರಿಗೆ ಆರ್ಥಿಕ ಸಹಾಯ ನೀಡುವ ನಿಟ್ಟಿನಲ್ಲಿ ಈ ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಸೂಕ್ತ ದಾಖಲೆಯನ್ನು ನೀಡಿ ಸಹಾಯ ಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದ್ದು ಬ್ಯಾಂಕಿನ ಆಡಳಿತ ಮಂಡಳಿ ಅರ್ಜಿಗಳನ್ನು ಪರಿಶೀಲಿಸಿ ಸಹಾಯಧನ ಮಂಜೂರು ಮಾಡಲಿದೆ.
ಬ್ಯಾಂಕಿನ ಸದಸ್ಯರು ಮಾತ್ರ ಈ ಯೋಜನೆಗೆ ಅರ್ಹರಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಬ್ಯಾಂಕಿನಶಾಖೆಗಳನ್ನು ಸಂಪರ್ಕಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
 
 
 
 
 
 
 
 
 
 

Leave a Reply